ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಯೋತ್ಪಾದನೆ ದೊಡ್ಡ ಸವಾಲಾಗಿ ಪರಿಣಮಿಸಿದೆ, ಭಯೋತ್ಪಾದನೆ ವಿರುದ್ಧ ಜನರು ಒಟ್ಟಾಗಿ ಹೋರಾಡೋಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯುತ್ತಿರುವ ಪಿ20 ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.
ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ ಮಾತನಾಡಿದ್ದು, ಭಯೋತ್ಪಾದನೆ ವಿರುದ್ಧ ಎಲ್ಲರೂ ಒಟ್ಟಿಗೇ ಹೋರಾಡಬೇಕಿದೆ ಎಂದಿದ್ದಾರೆ. ಹಮಾಸ್ ಉಗ್ರರು ಹೆಂಗಸರು, ಮಕ್ಕಳನ್ನು ಕೊಂದಿದ್ದಾರೆ, ಕಟುಕರಂತೆ ವರ್ತಿಸಿದ್ದಾರೆ. ಭಯೋತ್ಪಾದನೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದಿದ್ದಾರೆ.