ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತಕ್ಕೆ ಬೇಕಾಗಿದ್ದ ಭಯೋತ್ಪಾದಕನ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ನಿಷೇಧಿತ ಲಷ್ಕರ್-ಎ-ತೊಯ್ಬಾದ ಸಹಚರನಾಗಿ ಕೆಲಸ ಮಾಡುತ್ತಿದ್ದ ಉನ್ನತ ಭಯೋತ್ಪಾದಕ ಕಮಾಂಡರ್ ರಿಯಾಜ್ ಅಹ್ಮದ್ ಅಲಿಯಾಸ್ ಅಬು ಖಾಸಿಮ್ ಹತ್ಯೆಗೀಡಾದ ಟೆರರಿಸ್ಟ್.‌ ಜನವರಿ 1 ರಂದು ನಡೆದ ಧಂಗ್ರಿ ಭಯೋತ್ಪಾದಕ ದಾಳಿಯ ಹಿಂದಿನ ಪ್ರಮುಖ ಸಂಚುಕೋರರಲ್ಲಿ ರಿಯಾಜ್ ಅಹ್ಮದ್ ಕೂಡ ಒಬ್ಬ.

ರಾಜೌರಿ ಜಿಲ್ಲೆಯ ಧಂಗ್ರಿ ಗ್ರಾಮದಲ್ಲಿ ಭಯೋತ್ಪಾದಕರು ನಡೆಸಿದ ಮನಬಂದಂತೆ ಗುಂಡಿನ ದಾಳಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದರು. ಜಮ್ಮು ಪ್ರದೇಶದ ಮೂಲದ ಅಹ್ಮದ್ 1999ರಲ್ಲಿ ತಲೆಮರೆಸಿಕೊಂಡಿದ್ದ. ರಾವಲ್ಕೋಟ್ ಪ್ರದೇಶದ ಅಲ್-ಕುದುಸ್ ಮಸೀದಿಯಲ್ಲಿ ಮುಂಜಾನೆ ಪ್ರಾರ್ಥನೆಯ ವೇಳೆ ಅಹ್ಮದ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ.

ಅಹ್ಮದ್ ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೊಯ್ಬಾ ಬೇಸ್ ಕ್ಯಾಂಪ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಇತ್ತೀಚೆಗೆ ರಾವಲ್‌ಕೋಟ್‌ಗೆ ತೆರಳಿದ್ದ ಎಂದು ಹೇಳಲಾಗಿದ್ದು, ಈತ ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಕಮಾಂಡರ್ ಸಜ್ಜದ್ ಜಾತ್‌ಗೆ ಆಪ್ತನಾಗಿದ್ದ ಎಂಬ ಮಾಹಿತಿಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!