ಸೂರು ಕಳೆದುಕೊಂಡ್ರೂ ಸೊಕ್ಕು ಕಡಿಮೆ ಆಗಿಲ್ಲ, ಮನೆ ಕೆಡವಿದ್ದಕ್ಕೆ ಪ್ರತೀಕಾರ ತೀರಿಸಿಕೊಳ್ತೀವಿ ಎಂದ ಉಗ್ರರು 

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಯನ್ನು ಮರೆಯಲಾಗುವುದಿಲ್ಲ. ನಮ್ಮ ಭಾರತದ ಹೆಣ್ಣುಮಕ್ಕಳ ಕಣ್ಣಲ್ಲಿ ನೀರು ಬರಿಸಿದ ಉಗ್ರರನ್ನು ಸದೆಬಡೆಯಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಶಂಕಿತ ಉಗ್ರರ ಮನೆಗಳನ್ನು ಧ್ವಂಸ ಮಾಡಲಾಗಿತ್ತು. ಇದಕ್ಕೆ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಟಿಆರ್​ಎಫ್​ನ ಉಗ್ರರು ಎಚ್ಚರಿಕೆ ನೀಡಿದ್ದಾರೆ.

ಹಿಂದುಗಳ ಮೇಲೆ ನಡೆಸಿದ ದಾಳಿಯನ್ನು ಟಿಆರ್‌ಎಫ್‌ ಒಪ್ಪಿಕೊಂಡಿತ್ತು. ಆನಂತರ ಪ್ರಧಾನಿ ಮೋದಿ ನೀವು ಇಮ್ಯಾಜಿನ್‌ ಮಾಡಿದರ ರೀತಿಯಲ್ಲಿ ಸಾವು ಬರುತ್ತದೆ ಎಂದು ಹೇಳಿದ್ದರು.

ಇದಕ್ಕೆ ಹೆದರಿದ ಟಿಆರ್‌ಎಫ್‌ ದಾಳಿ ಮಾಡಿದ್ದು ನಾವಲ್ಲ, ನಮ್ಮ ವೆಬ್‌ಸೈಟ್‌ನ್ನು ಯಾರೋ ಹ್ಯಾಕ್‌ ಮಾಡಿದ್ದಾರೆ ಎಂದು ಉಲ್ಟಾ ಹೊಡೆದಿತ್ತು. ಇದೀಗ ಅದರ ಕಮಾಂಡರ್ ಅಹ್ಮದ್ ಸಲಾರ್ ಅವರ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ. ಇತ್ತೀಚೆಗೆ ಉಗ್ರರ ಮನೆಗಳಲ್ಲಿ ನಡೆದ ಸ್ಫೋಟ ಹಾಗೂ ಭಯೋತ್ಪಾದಕ ಸಂಬಂಧಿಕರ ಹತ್ಯೆ ಬಗ್ಗೆ ಉಲ್ಲೇಖಿಸಲಾಗಿದೆ. ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರಿಂದ ಸೇಡು ತೀರಿಸಿಕೊಳ್ಳುತ್ತೇವೆ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!