ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಾಳೆಯಿಂದ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬಾರ್ಡರ್ ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಸರಣಿ ಸಮಬಲದ ಸಾಧನೆಯತ್ತ ಕಾಂಗರೂ ಪಡೆಯ ಚಿತ್ತ ನೆಟ್ಟಿದೆ.
ವಿಶ್ವ ಟೆಸ್ಟ್ ಚಾಂಪಿನಯನ್ಶಿಪ್ ಫೈನಲ್ ಪ್ರವೇಶಕ್ಕೆ ಆಸಿಸ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದ ಗೆಲುವು ಭಾರತಕ್ಕೆ ಅಗತ್ಯವಾಗಿದೆ.
ಸ್ಮಿತ್ ನಾಯಕತ್ವದಲ್ಲಿ ಇಂದೋರ್ನ ಹೋಳ್ಕರ್ ಸ್ಟೇಡಿಯಂನಲ್ಲಿ ನಡೆದ ಮೊರನೇ ಟೆಸ್ಟ್ನ್ನು ಆಸಿಸ್ ಗೆದ್ದುಕೊಂಡಿದೆ. ನಾಲ್ಕನೇ ಟೆಸ್ಟ್ಗೂ ನಾಯಕ ಪ್ಯಾಟ್ ಕಮಿನ್ಸ್ ಅನುಪಸ್ಥಿತಿ ಇದ್ದು, ನಾಯಕತ್ವದ ಹೊಣೆ ಸ್ಟೀವ್ ಸ್ಮಿತ್ ಹೆಗಲ ಮೇಲೆಯೇ ಇದೆ. ಮೂರನೇ ಟೆಸ್ಟ್ನಲ್ಲಿ ಗೆಲುವು ಸಾಧಿಸಿದ ಸ್ಮಿತ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ಪ್ರವೇಶ ಪಡೆದುಕೊಂಡಿದೆ.
ಟೆಸ್ಟ್ ಚಾಂಪಿಯನ್ ಶಿಪ್ಗೆ ಆಯ್ಕೆಗೆ ಗೆಲುವು ಅನಿವಾರ್ಯ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶಕ್ಕೆ ಭಾರತ ಈ ಟೆಸ್ಟ್ ಪಂದ್ಯದಲ್ಲಿ ಗೆಲ್ಲಬೇಕಿದೆ. ಇಲ್ಲದಿದ್ದಲ್ಲಿ ಶ್ರೀಲಂಕಾ ಫೈನಲ್ಗೆ ಹೋಗುವ ಅವಕಾಶ ಮಾಡಿಕೊಳ್ಳುವ ಸಾಧ್ಯತೆ ಇದೆ. ನಾಳೆಯಿಂದ ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಶ್ರೀಲಂಕಾಗೆ ಪಂದ್ಯ ಆರಂಭವಾಗಲಿದೆ. ಎರಡು ಟೆಸ್ಟ್ ಪಂದ್ಯದ ಸರಣಿಯಲ್ಲಿ ಕಿವಿಸ್ನ್ನು ತವರಿನಲ್ಲಿ ಕ್ಲೀನ್ ಸ್ವೀಪ್ ಮಾಡಿದರೆ ಲಂಕಾ WTC ಫೈನಲ್ ಪ್ರವೇಶಿಸಲಿದೆ.
ಭಾರತ ತಂಡದಲ್ಲಿ ಬದಲಾವಣೆ ಸಾಧ್ಯತೆ: ಈ ಟೆಸ್ಟ್ ಸರಣಿಯಲ್ಲಿ ಪದಾರ್ಪಣೆ ಮಾಡಿದ ವಿಕೆಟ್ ಕೀಪರ್ ಕೆಎಸ್ ಭರತ್ ಅವರನ್ನು ತಂಡದಿಂದ ಕೈಬಿಟ್ಟು ಇಶನ್ ಕಿಶನ್ಗೆ ಅವಕಾಶ ಕೊಡುವ ಸಾಧ್ಯತೆ ಇದೆ. ಏಕದಿನ ಮತ್ತು ಟಿ20ಯಲ್ಲಿ ತಮ್ಮ ಫಾರ್ಮ್ನ್ನು ತೋರಿರುವ ಕಿಶನ್ ಅಂತಿಮ ಟೆಸ್ಟ್ನಲ್ಲಿ ಡೆಬ್ಯೂ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.