ತಂದೆಗೆ ಕೊಟ್ಟ ಮಾತು ಉಳಿಸಿಕೊಂಡ ‘ಮಹಾ’ ಸಿಎಂ ಠಾಕ್ರೆ: ಏನು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ನಡುವೆ ಇಂದು ಸಂಜೆ ನಡೆದಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ರಾಜ್ಯದ ಔರಂಗಾಬಾದ್​ ನಗರಕ್ಕೆ ‘ಸಂಭಾಜಿನಗರ’ ಹಾಗು ಒಸ್ಮಾನಾಬಾದ್‌ಗೆ ‘ಧಾರಶಿವ್’​ ಎಂದು ಮರುನಾಮಕರಣ ಮಾಡಲು ಸಂಪುಟ ಅನುಮೋದನೆ ನೀಡಿದೆ. ಇದೇ ವೇಳೆ, ನವಿಮುಂಬೈ ವಿಮಾನ ನಿಲ್ದಾಣದ ಹೆಸರನ್ನು ಡಿ.ಬಿ.ಪಾಟೀಲ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬದಲಾಯಿಸಲು ನಿರ್ಧರಿಸಲಾಗಿದೆ.
ಈ ಕುರಿತು ಮಾತನಾಡಿದ ಅವರು , ಉದ್ಧವ್ ಠಾಕ್ರೆ, ಔರಂಗಾಬಾದ್​ಗೆ ಸಂಭಾಜಿ ನಗರ ಎಂದು ಮರುನಾಮಕರಣ ಮಾಡುವುದಾಗಿ ನನ್ನ ತಂದೆ ಬಾಳಾ ಸಾಹೇಬ್​​ ಠಾಕ್ರೆಗೆ ನೀಡಿರುವ ಭರವಸೆಯನ್ನು ನಾನು ಮರೆತಿಲ್ಲ ಎಂದು ಹೇಳಿದ್ದರು. ಆ ಭರವಸೆಯಂತೆ ಇದೀಗ ನಿರ್ಧಾರ ಕೈಗೊಂಡಿದ್ದಾರೆ.
ಈ ಹಿಂದೆ ಮೊಘಲರ ಆಡಳಿತದಲ್ಲಿ ಔರಂಗಜೇಬ್, ಮಹಾರಾಷ್ಟ್ರದ ಮರಾಠವಾಡ ಪ್ರದೇಶದಲ್ಲಿ ಔರಂಗಾಬಾದ್ ನಗರ ಸ್ಥಾಪನೆ ಮಾಡಿದ್ದರು. ಇದೀಗ ಈ ನಗರವನ್ನು ‘ಸಂಭಾಜಿನಗರ’ ಎಂದು ಮರುನಾಮಕರಣ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರದ ವಿರುದ್ಧಶಿವಸೇನೆಯ ಶಾಸಕರು ಬಂಡಾಯವೆದ್ದಿರುವ ಕಾರಣ ಸರ್ಕಾರ ಅಲ್ಪಮತಕ್ಕೆ ಕುಸಿಯುವ ಭೀತಿಯಲ್ಲಿದೆ. ನಾಳೆ ವಿಶ್ವಾಸಮತಯಾಚನೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!