ಅಂದು ನಾನು ಜೀವನದ ಪ್ರತಿ ದುಃಖವನ್ನೂ ಅನುಭವಿಸಿದೆ: ಗೋಧ್ರಾ ಗಲಭೆ ಕುರಿತು ಪ್ರಧಾನಿ ಮೋದಿ ಮಾತು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜೀರೋಧಾ ಸಹಸಂಸ್ಥಾಪಕ ನಿಖಿಲ್‌ ಕಾಮತ್‌ ಅವರೊಂದಿಗೆ ತಮ್ಮ ಮೊಟ್ಟಮೊದಲ ಪಾಡ್‌ಕಾಸ್ಟ್‌ನಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಈ ವೇಳೆ ಜೀವನದಲ್ಲಿ ಎದುರಿಸಿದ ಅತಿದೊಡ್ಡ ಸವಾಲುಗಳಲ್ಲಿ ಒಂದಾದ 2002ರ ಗುಜರಾತ್‌ ಗಲಭೆಯ ಬಗ್ಗೆಯೂ ಮನಬಿಚ್ಚಿ ತಿಳಿಸಿದರು.

2002ರ ಫೆಬ್ರವರಿ 24 ರಂದು ನಾನು ಮೊದಲ ಬಾರಿಗೆ ಶಾಸಕನಾಗಿದ್ದೆ. ಫೆಬ್ರವರಿ 27ಕ್ಕೆ ನಾನು ವಿಧಾನಸಭೆಗೆ ಪ್ರವೇಶಿಸಿದೆ. ಗೋಧ್ರಾದಲ್ಲಿ ಘಟನೆ ಆದಾಗ ನನಗೆ ಶಾಸಕನಾಗಿ ಬರೀ ಮೂರು ದಿನಗಳ ಅನುಭವವಿತ್ತಷ್ಟೇ. ರೈಲಿಗೆ ಬೆಂಕಿ ಬಿದ್ದಿದೆ ಎಂದು ಮೊದಲ ಬಾರಿಗೆ ನನಗೆ ವರದಿ ಬಂತು. ಕೆಲ ಹೊತ್ತಿನಲ್ಲಿಯೇ ಅಲ್ಲಿ ಸಾವು ಕಂಡಿರುವವರ ಮಾಹಿತಿಗಳು ಬರಲಾರಂಭಿಸಿತು. ಈ ವೇಳೆ ನಾನು ವಿಧಾನಸಭೆಯಲ್ಲಿದೆ. ಇದು ನನಗೆ ಚಿಂತೆ ಉಂಟು ಮಾಡಿತ್ತು ಎಂದು ಪ್ರಧಾನಿ ಹೇಳಿದ್ದಾರೆ.

ಈ ವೇಳೆ ವಿಧಾನಸಭೆಯಿಂದ ಹೊರಗೆ ಬಂದ ಕೂಡಲೇ, ತಕ್ಷಣವೇ ನಾನು ಗೋಧ್ರಾಗೆ ಭೇಟಿ ನೀಡಬೇಕು ಎಂದು ತಿಳಿಸಿದೆ. ಆದರೆ, ಅಂದು ಕೇವಲ ಒಂದು ಹೆಲಿಕಾಪ್ಟರ್‌ ಇತ್ತು. ನನ್ನ ಪ್ರಕಾರ ಅದು ಓಎನ್‌ಜಿಸಿ ಕಂಪನಿಗೆ ಸೇರಿದ್ದಾಗಿತ್ತು. ಆದರೆ, ಆ ಹೆಲಿಕಾಪ್ಟರ್‌ ಸಿಂಗಲ್‌ ಇಂಜಿನ್‌ ಆಗಿರುವ ಕಾರಣ, ವಿಐಪಿಗಳು ಅದರಲ್ಲಿ ಪ್ರಯಾಣ ಮಾಡೋದು ಸರಿಯಲ್ಲ. ನೀಡಲು ಸಾಧ್ಯವಿಲ್ಲ ಎಂದಿದ್ದರು. ಈ ವೇಳೆ ಅವರೊಂದಿಗೆ ಕೆಲ ಮಾತುಕತೆಗಳು ಕೂಡ ನಡೆಯಿತು.

ಏನಾದರಾಗಲಿ, ಅದಕ್ಕೆ ನಾನೇ ಜವಾಬ್ದಾರಿ ಎಂದು ಅವರಿಗೆ ಹೇಳಿದ್ದೆ. ಆ ಬಳಿಕ ಗೋಧ್ರಾಗೆ ಭೇಟಿ ನೀಡಲು ಸಾಧ್ಯವಾಯಿತು. ಅಲ್ಲಿನ ನೋವಿನ ದೃಶ್ಯಗಳನ್ನು ನಾನು ನೋಡಿದೆ. ಆ ಮೃತದೇಹಗಳು..ಅಂದು ನಾನು ಜೀವನದ ಪ್ರತಿ ದುಃಖವನ್ನೂ ಅನುಭವಿಸಿದೆ. ಆದರೆ, ನಾನು ನನ್ನ ಭಾವನೆಗಳು ಮತ್ತು ನೈಸರ್ಗಿಕ ಪ್ರವೃತ್ತಿಯಿಂದ ದೂರವಿರಬೇಕಾದ ಸ್ಥಾನದಲ್ಲಿ ಕುಳಿತಿದ್ದೇನೆ ಎಂದು ನನಗೆ ತಿಳಿದಿತ್ತು. ನನ್ನನ್ನು ನಿಯಂತ್ರಿಸಲು ನಾನು ಸಾಧ್ಯವಾದಷ್ಟು ಪ್ರಯತ್ನ ಮಾಡಿದೆ ಎಂದು ಅವರು ಹೇಳಿದರು.

2002ರ ಫೆಬ್ರವರಿ 27 ರಂದು ಗೋಧ್ರಾದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್‌ ರೈಲಿನ ಎಸ್‌-6 ಕೋಚ್‌ಗೆ ಮತಾಂಧರು ಬೆಂಕಿಹಚ್ಚಿದ್ದರು. ಇದರಲ್ಲಿ ಅಯೋಧ್ಯೆಯಿಂದ ಬರುತ್ತಿದ್ದ ಹಿಂದು ಭಕ್ತಾದಿಗಳು ಹಾಗೂ ಕರಸೇವಕರೂ ಸೇರಿ 59 ಮಂದಿ ಸುಟ್ಟು ಕರಕಲಾಗಿದ್ದರು. ಯಾರೊಬ್ಬರ ದೇಹ ಕೂಡ ಗುರುತಿಸುವಂಥ ಸ್ಥಿತಿಯಲ್ಲಿ ಇದ್ದಿರಲಿಲ್ಲ. ಇದರ ಬೆನ್ನಲ್ಲಿಯೇ ಗುಜರಾತ್‌ ಇತಿಹಾಸದಲ್ಲಿಯೇ ಕಂಡ ಅತಿದೊಡ್ಡ ಕೋಮುಗಲಭೆ ಉಂಟಾಗಿತ್ತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!