ಹೊಸದಿಗಂತ ಡಿಜಿಟಲ್ ಡೆಸ್ಕ್
ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಇಡಿ ದಾಳಿ ವೇಳೆ ದೊರಕಿರುವ ಹಣ ನನ್ನದಲ್ಲ ಎಂಬ ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ್ದಾರೆ.
ಕೋಲ್ಕತ್ತಾದಲ್ಲಿ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಮನೆಗಳಿಂದ ರಾಶಿಗಟ್ಟಲೆ ನಗದು ಮತ್ತು ಕಿಲೋಗಟ್ಟಲೆ ಚಿನ್ನವನ್ನು ವಶಪಡಿಸಿಕೊಂಡ ಕೆಲವು ದಿನಗಳ ನಂತರ, ಪಾರ್ಥ ಚಟರ್ಜಿ ಭಾನುವಾರ ಹಣ ತನಗೆ ಸೇರಿದ್ದಲ್ಲ ಎಂದು ಹೇಳಿದ್ದಾರೆ.
ಇಡಿ ದಾಳಿಯ ವೇಳೆ ಅರ್ಪಿತಾ ಮುಖರ್ಜಿ ಅವರಿಗೆ ಸೇರಿದ ಎರಡು ಮನೆಗಳಿಂದ ಸುಮಾರು 50 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದೆ. ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಇಬ್ಬರನ್ನೂ ಈ ತಿಂಗಳ ಆರಂಭದಲ್ಲಿ ಬಂಧಿಸಲಾಗಿದೆ.
ಇದೀಗ ಪಾರ್ಥ ಚಟರ್ಜಿ ಯಾರಾದರೂ ತಮ್ಮ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ , ‘ಸಮಯ ಬಂದಾಗ ಎಲ್ಲವನ್ನೂ ನೀವೇ ತಿಳಿದುಕೊಳ್ಳುತ್ತಿರಿ’ ಎಂದಿದ್ದಾರೆ.
ಹಣವಷ್ಟೇ ಅಲ್ಲದೆ, ಇಡಿ ಅಧಿಕಾರಿಗಳು ಅಪಾರ ಪ್ರಮಾಣದ ವಿದೇಶಿ ವಿನಿಮಯ, ಚಿನ್ನ ಮತ್ತು ಹಗರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿವಿಧ ಸ್ಥಳಗಳ ದಾಖಲೆಗಳನ್ನು ಸಹ ಪತ್ತೆ ಮಾಡಿದ್ದಾರೆ.