ಮೈಸೂರು ಅರಮನೆ, ಕೆಆರ್ ಎಸ್ ವೀಕ್ಷಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಹೊಸದಿಗಂತ ವರದಿ, ಮೈಸೂರು:

ಅರಮನೆ ನಗರಿ ಮೈಸೂರಿಗೆ ಪ್ರವಾಸ ಕೈಗೊಂಡಿರುವ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಮೈಸೂರು ಅರಮನೆಗೆ ಭೇಟಿ ನೀಡಿ, ಅರಮನೆ ವೈಭವವನ್ನು ವೀಕ್ಷಣೆ ಮಾಡಿದರು.
ರಾಜವಂಶಸ್ಥೆ ಪ್ರಮೋದಾ ದೇವಿ ಅವರು ರಾಜ್ಯಪಾಲರನ್ನು ಸ್ವಾಗತಿಸಿ, ಕರ್ನಾಟಕದ ರಾಜ ಸಂಸ್ಕೃತಿ ಮತ್ತು ಮೈಸೂರು ಸಂಸ್ಥಾನದ ಇತಿಹಾಸವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕಮಲ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಸಂಗೀತ ಕಾರಂಜಿ ವೀಕ್ಷಣೆ: ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟು ಮತ್ತು ಬೃಂದಾವನ್ ಉದ್ಯಾನವನ್ನು ವೀಕ್ಷಿಸಿದ ರಾಜ್ಯಪಾಲರು ಸಂಗೀತ ನೃತ್ಯ ಕಾರಂಜಿಯ ಸೊಬಗನ್ನು ಸವಿದರು.
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳಾದ ಅಶ್ವತಿ, ಎಸ್ಪಿ ಯತೀಶ್ ಸೇರಿದಂತೆ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!