ಸಂಪನ್ನಗೊಂಡ ಮೈಸಲಗಾ ಗ್ರಾಮ ದೇವತೆ ಶ್ರೀ ಮಹಾಲಕ್ಷ್ಮಿಯ 10ನೇ ಜಾತ್ರಾಮಹೋತ್ಸವ

ಹೊಸದಿಗಂತ ವರದಿ ಬಸವಕಲ್ಯಾಣ:

ತಾಲೂಕಿನ ಮೈಸಲಗಾ ಗ್ರಾಮದಲ್ಲಿ ಹಾರಕೂಡದ ಪರಮಪೂಜ್ಯ ಶ್ರೀ ಡಾ. ಚನ್ನವೀರ ಶಿವಾಚಾರ್ಯರ ಅವರ ದಿವ್ಯ ಸಾನಿಧ್ಯದಲ್ಲಿ ಗ್ರಾಮ ದೇವತೆ ಶ್ರೀ ಮಹಾಲಕ್ಷ್ಮಿಯ 10ನೇ ಜಾತ್ರಾಮಹೋತ್ಸವ ಅದ್ದೂರಿಯಾಗಿ ಜರುಗಿತು. ಜಾತ್ರಾ ಮಹೋತ್ಸವ ಅಂಗವಾಗಿ ಜರುಗಿದ ಧರ್ಮಸಭೆಯನ್ನು ಹಾರಕೂಡದ ಪರಮಪೂಜ್ಯರು ಉದ್ಘಾಟಿಸಿ ಆಶೀರ್ವಚನ ನೀಡಿದರು. ಹಾಗೂ ಶ್ರೀ ಅಭಿನವ ಶಿವಲಿಂಗೇಶ್ವರ ಮಹಾಸ್ವಾಮಿಗಳು ಖೇರಡಾ ಬಿ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಜಾತ್ರಾ ಮಹೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಶ್ರೀ ಕಡಿಕೋಳ ಮಹಾಲಿಂಗೇಶ್ವರ ಮಹಾ ಪುರಾಣ ವನ್ನು ಮಲ್ಲಯ್ಯ ಶಾಸ್ತ್ರಿ ಐನಾಪುರ ಮಹಾಮಂಗಲಗೊಳಿಸಿದರು. ಮಾಜಿ ತಾಲೂಕ ಪಂಚಾಯಿತಿ ಅಧ್ಯಕ್ಷರಾದ ಗುರುಲಿಂಗಪ್ಪ ಸೈದಾಪುರೆ, ಮಲ್ಲಿನಾಥ ಹಿರೇಮಠ ಹಾರಕೂಡ, ಶಿವಶರಣಯ್ಯ ಸ್ವಾಮಿ ಕಂಬಳಿ ಮಠ, ನಂದಿನಿ ಪಿಎಸ್‍ಐ ಕಮಲನಗರ್, ಭೀಮಶಂಕರ್ ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು. ಗುಂಡಪ್ಪ ಪಾಟೀಲ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!