ಕಾರವಾರದ ಇಬ್ಬರು ಅಧಿಕಾರಿಗಳ ಮನೆಮೇಲೆ ರೈಡ್;‌ ಭ್ರಷ್ಟಾಚಾರ ದಾಖಲೆ ಜಾಲಾಡಿದ ಎಸಿಬಿ ತಂಡ

ಹೊಸದಿಗಂತ ವರದಿ, ಕಾರವಾರ:
ನಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಅಧಿಕಾರಿಗಳಿಬ್ಬರ ಮನೆಯ ಮೇಲೆ ಭ್ರಷ್ಟಾಚಾರ ವಿಗ್ರಹ ದಳದ ಅಧಿಕಾರಿಗಳು ಶುಕ್ರವಾರ ಬೆಳಿಗ್ಗಿನ ಜಾವ ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ರಾಜೀವ ನಾಯಕ ಅವರ ಎಂ.ಜಿ.ರಸ್ತೆಯಲ್ಲಿ ಇರುವ ಮನೆಯ ಮೇಲೆ ಎ.ಸಿ.ಬಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.
ಅದೇ ರೀತಿ ಜಿಲ್ಲಾ ನೋಂದಣಿ ಅಧಿಕಾರಿ ಶ್ರೀಧರ ಅವರ ಹಬ್ಬುವಾಡದ ಮನೆ, ಬೆಂಗಳೂರಿನಲ್ಲಿರುವ ನಿವಾಸ ಮತ್ತು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮನೆಗಳ ಎ.ಸಿ.ಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಎ.ಸಿ.ಬಿ ಡಿ.ವೈ.ಎಸ್. ಪಿ ಪ್ರಕಾಶ ನೇತೃತ್ವದಲ್ಲಿ ಹುಬ್ಬಳ್ಳಿ ಎ.ಸಿ.ಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!