Sunday, December 3, 2023

Latest Posts

ರಾಜ್ಯ ಸರಕಾರದಿಂದ ಮತ್ತೆ 21 ಬರಪೀಡಿತ 22 ಸಾಧಾರಣ ಬರಪೀಡಿತ ತಾಲೂಕುಗಳ ಘೋಷಣೆ

ಹೊಸದಿಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಮುಂಗಾರು ಮುನಿಸಿಕೊಂಡ ಕಾರಣ ಭೀಕರ ಬರದ ಛಾಯೆ ಆವರಿಸಿದೆ.ಸರ್ಕಾರವು ಇತ್ತೇಚೆಗೆ ರಾಜ್ಯದ 195 ತಾಲೂಕುಗಳು ಬರ (drought) ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ 21 ಬರಪೀಡಿತ, 22 ಸಾಧಾರಣ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳ ಪಟ್ಟಿ ಘೋಷಿಸಿ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಸೋಮವಾರ ಆದೇಶ ಹೊರಡಿಸಿದ್ದಾರೆ.

ಬರಪೀಡಿತ ತಾಲ್ಲೂಕುಗಳ ಪಟ್ಟಿ:
ರಾಜ್ಯ ಸರ್ಕಾರವು ಘೋಷಿಸಿರುವ ಬರಪೀಡಿತ ತಾಲೂಕುಗಳೆಂದರೆ ಚಾಮರಾಜನಗರ, ಯಳಂದೂರು, ಕೆ ಆರ್ ನಗರ, ಬೆಳಗಾವಿ,ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾವಿ, ಕಲಘಟಗಿ, ಅಳ್ನಾವರ್, ಆಲೂರು, ಅರಸೀಕೆರೆ,ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ ಸೇರಿದಂತೆ ಹೆಚ್ಚುವರಿ ಬರಪೀಡಿತ ತಾಲೂಕುಗಳನ್ನು ಘೋಷಿಸಿದೆ.

ಸಾಧಾರಣ ಬರಪೀಡಿತ ತಾಲ್ಲೂಕುಗಳ ಪಟ್ಟಿ
ಬೆಂಗಳೂರು ಉತ್ತರ, ಚನ್ನಪಟ್ಟಣ, ಮಾಗಡಿ,ಮಾಲೂರು,ತುಮಕೂರು, ಗುಂಡ್ಲುಪೇಟೆ,ಹನೂರು, ಕೊಳ್ಳೇಗಾಲ, ದೇವದುರ್ಗ, ಮಸ್ಕಿ, ಬೇಲೂರು,ಹೊಳೆನರಸೀಪುರ, ಸಕಲೇಶಪುರ, ಶೃಂಗೇರಿ, ಚನ್ನರಾಯಪಟ್ಟಣ, ಸೋಮವಾರಪೇಟೆ, ಕೊಪ್ಪ, ನರಸಿಂಹರಾಜಪುರ, ಮಂಗಳೂರು, ಮೂಡುಬಿದರೆ, ಬ್ರಹ್ಮಾವರ, ಕಾರವಾರ ಸಾಧಾರಣ ಬರಪೀಡಿತ ಎಂದು ಘೋಷಿಸಲಾಗಿದೆ .

ಈಗಾಗಲೇ ಮೊದಲು 195 ತಾಲೂಕುಗಳನ್ನು ಬರಬೇಡಿ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು ಅದರ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಕೇಂದ್ರದಿಂದ ಬರ ಅಧ್ಯಯನ ತಂಡ ಒಂದು ಆಗಮಿಸಿ ಬೆಳೆ ಸಮೀಕ್ಷೆ ನಡೆಸುತ್ತಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!