ಹುಬ್ಬಳ್ಳಿ ಗಲಭೆ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿಯ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಹುಬ್ಬಳ್ಳಿಯಲ್ಲಿ ಗಲಭೆ ಎಬ್ಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಈ ಮೂಲಕ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಎಐಎಂಐಎಂ ಪಕ್ಷದ ಮತ್ತೊಬ್ಬ ಮುಖಂಡನ ಬಂಧನ ಆದಂತಾಗಿದೆ. ಎಐಎಂಐಎಂ ನಗರ ಘಟಕದ ಅಧ್ಯಕ್ಷ ದಾದಾಪೀರ್ ಬೆಟಗೇರಿಯನ್ನು ಇಂದು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
ವಾಟ್ಸ್​ಆಯಪ್​ನಲ್ಲಿ ಎಡಿಟೆಡ್ ವಿಡಿಯೋವೊಂದನ್ನು ಸ್ಟೇಟಸ್ ಆಗಿ ಹಾಕಿಕೊಂಡಿದ್ದನ್ನೇ ನೆಪವಾಗಿಸಿಕೊಂಡು ಗಲಭೆ ಎಬ್ಬಿಸಿದರು.
ನಿನ್ನೆ ಎಐಎಂಐಎಂ ಪಕ್ಷದ ಮುಖಂಡ, ಕಾರ್ಪೋರೇಟರ್​ ನಜೀರ್ ಅಹ್ಮದ್ ಹೊನ್ಯಾಳ ಎಂಬಾತನ್ನನು ಪೊಲೀಸರು ಬಂಧಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!