ಚಿತ್ರ ಸೃಷ್ಟಿಸಿದ ಜಾಗೃತಿಯಿಂದ ಅನೇಕ ಹುಡುಗಿಯರ ಜೀವ ಉಳಿಯಲಿದೆ: ‘ದಿ ಕೇರಳ ಸ್ಟೋರಿ’ ಸಕ್ಸಸ್ ಕುರಿತು ನಾಯಕಿ ಅದಾ ಶರ್ಮಾ ಮಾತು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ನಾಗಾಲೋಟ ಮುಂದುವರಿದಿದೆ. ಮೇ 5ರಂದು ಈ ಸಿನಿಮಾ ಬಿಡುಗಡೆ ಆಯಿತು. ಮೊದಲ ದಿನ ಸಾಧಾರಣ ಗಳಿಕೆ ಆಗಿತ್ತು. ಆದರೆ ಎರಡನೇ ದಿನ ಕಲೆಕ್ಷನ್​ನಲ್ಲಿ ಗಣನೀಯ ಏರಿಕೆ ಕಂಡಿತು. ಸೋಮವಾರದ ಬಳಿಕ ‘ದಿ ಕೇರಳ ಸ್ಟೋರಿ’ ಚಿತ್ರದ ಗಲ್ಲಾಪೆಟ್ಟಿಗೆ ಉತ್ತಮ ಗಳಿಕೆಯಾಗುತ್ತಿದೆ.

5 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡಿರುವ ಈ ಚಿತ್ರ ಹಾಫ್​ ಸೆಂಚುರಿ ಬಾರಿಸಿದೆ. ಅಂದರೆ 50 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿ ಮುನ್ನುಗ್ಗುತ್ತಿದೆ. 5 ದಿನಕ್ಕೆ 56.86 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ.

ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿರುವ ದಿ ಕೇರಳ ಸ್ಟೋರಿ ಬಗ್ಗೆ ನಟಿ ಅದಾ ಶರ್ಮಾ ಮಾತನಾಡಿದ್ದಾರೆ. ‘ಚಿತ್ರ ಸೃಷ್ಟಿಸಿದ ಜಾಗೃತಿಯು ಅನೇಕ ಹುಡುಗಿಯರ ಜೀವಗಳನ್ನು ಉಳಿಸುತ್ತದೆ. ನಮಗೆ ದೊರೆತ ಬೆಂಬಲ ದೊಡ್ಡದು. ನಾನು ಕೃತಜ್ಞನಾಗಿದ್ದೇವೆ’ ಎಂದು ಹೇಳಿದ್ದಾರೆ.

ಸಿನಿಮಾ ಕುಟುಂಬಕ್ಕೆ ಸೇರಿದವಳದಿದ್ದರೂ ನಾನು ಎಲ್ಲರಿಂದಲೂ ಪಡೆದ ಪ್ರೀತಿ ಅಭೂತಪೂರ್ವವಾಗಿದೆ. ಇಡೀ ರಾಷ್ಟ್ರವೇ ನಮಗೆ ಬೆಂಬಲಿಸಿದೆ. ನನಗಾಗಿ ನಾನು ಕಂಡ ಕನಸುಗಳು ತುಂಬಾ ಚಿಕ್ಕದಾಗಿದೆ. ನನ್ನ ಪ್ರೀತಿ ಪಾತ್ರರು ನನ್ನ ಬಗ್ಗೆ ಹೊಂದಿರುವ ಕನಸುಗಳು ನನಸಾಗುತ್ತಿವೆ ಎಂದು ಹೇಳಿದ್ದಾರೆ.

ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಅದಾ ಶರ್ಮಾ ಶಾಲಿನಿ ಉನ್ನಿಕೃಷ್ಣನ್ ಪಾತ್ರದಲ್ಲಿ ನಟಿಸಿದ್ದಾರೆ. ‘ಈ ಪಾತ್ರ ಭಾವನಾತ್ಮಕವಾಗಿ ಮತ್ತು ದೈಹಿಕವಾಗಿ ತುಂಬಾ ಭಯವಾಗಿತ್ತು. ಈ ಭಯ ತುಂಬಾ ಆಳವಾಗಿ ಬೇರೂರಿದೆ’ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!