ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮರಸೂರು ಗ್ರಾಮದಲ್ಲಿ ನಡುರಸ್ತೆಯಲ್ಲೇ ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ವಿಜಯ್ ಕುಮಾರ್ (27) ಕೊಲೆಯಾದ ಯುವಕ. ಬಹುಕಾಲದ ವೈಷಮ್ಯದಿಂದ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ವಿಜಯ್ ಕುಮಾರ್ 2017 ರಲ್ಲಿ ಮನೋಜ್ ಅಲಿಯಾಸ್ ಬಬ್ಲು ಹತ್ಯೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಐದು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದರು.

ಅವರು ಇತ್ತೀಚೆಗೆ 7-8 ತಿಂಗಳ ಹಿಂದೆ ಬಿಡುಗಡೆಯಾಗಿದ್ದರು. ಸೇಡು ತೀರಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದ ಮನೋಜ್ ಸಹಚರರು ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ವಿಜಯ್ ಕುಮಾರ್ ಅವರನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here