SHOCKING | ಚೂರಿಯಿಂದ ಇರಿದು ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಹತ್ಯೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ನೆಬ್ ಸರಾಯ್​ನಲ್ಲಿ ವ್ಯಕ್ತಿ ಆತನ ಪತ್ನಿ ಹಾಗೂ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮೃತರನ್ನು ರಾಜೇಶ್ (53), ಅವರ ಪತ್ನಿ ಕೋಮಲ್ (47) ಮತ್ತು ಅವರ 23 ವರ್ಷದ ಮಗಳು ಕವಿತಾ ಎಂದು ಗುರುತಿಸಲಾಗಿದೆ. ಆದರೆ ಮಗ ಬೆಳಗ್ಗೆ ಜಾಗಿಂಗ್​​ಗೆ ಹೋಗಿದ್ದ ಕಾರಣ ಅದೃಷ್ಟವಶಾತ್ ಬದುಕುಳಿದಿದ್ದಾರೆ.

ಮಗ ಬೆಳಗ್ಗೆ 5 ಗಂಟೆ ಸುಮಾರಿಗೆ ಜಾಗಿಂಗ್​ಗೆಂದು ಹೊರಗೆ ಹೋಗಿದ್ದ ಮನೆಗೆ ಹಿಂದಿರುಗಿದಾಗ ಹೆತ್ತವರು ಹಾಗೂ ಸಹೋದರಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾನೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ತಕ್ಷಣವೇ ಪೊಲೀಸರು ದೌಡಾಯಿಸಿ ತನಿಖೆ ಆರಂಭಿಸಿದ್ದಾರೆ.

ಆದರೆ ಪ್ರಾಥಮಿಕ ತನಿಖೆಯಲ್ಲಿ ಮನೆಯಲ್ಲಿ ಯಾವ ವಸ್ತುವು ಕಳವಾಗಿಲ್ಲ ಎಂಬುದು ತಿಳಿದುಬಂದಿದೆ. ಇಂದು ತಂದೆ-ತಾಯಿಯ ಮದುವೆ ವಾರ್ಷಿಕೋತ್ಸವವಿತ್ತು ಎಲ್ಲರೂ ಸಂತೋಷದಿಂದಿದ್ದರು ಎಂದು ಮಗ ಹೇಳಿದ್ದಾನೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!