ಹೊಸದಿಗಂತ ಡಿಜಿಟಲ್ ಡೆಸ್ಕ್;
ರಾಜ್ಯದಲ್ಲಿ ಶೀಘ್ರವೇ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಮಸೂದೆ ಅಂಗೀಕಾರಗೊಳಿಸಲಾಗುತ್ತದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಮುಂದಿನ ವಾರ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ನಾವು ತಿದ್ದುಪಡಿ ಮಸೂದೆಯನ್ನು ಅಂಗೀಕರಿಸುತ್ತೇವೆ .ನಂತರ ನಾವು ಅದನ್ನು ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸುತ್ತೇವೆ ಎಂದು ಅವರು ಹೇಳಿದರು.
‘ನಾವು ಈ ದಿನವನ್ನು ಆರ್ಜಿ ಕಾರ್ ವೈದ್ಯರಿಗೆ ಅರ್ಪಿಸಿದ್ದೇವೆ. ನಮಗೆ ನ್ಯಾಯ ಬೇಕು ಆದರೆ ಬಿಜೆಪಿ ಇಂದು ಬಂದ್ ಗೆ ಕರೆ ನೀಡಿದೆ. ಅವರಿಗೆ ನ್ಯಾಯ ಬೇಕಿಲ್ಲ, ಅವರು ಬಂಗಾಳವನ್ನು ದೂಷಿಸಲು ಮಾತ್ರ ಪ್ರಯತ್ನಿಸುತ್ತಿದ್ದಾರೆ’ ಎಂದು ಅವರು ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣ ದೀದಿ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆಗಳಿಗೆ ಕಾರಣವಾಗಿದೆ.