ದಿಗಂತ ವರದಿ ಹುಬ್ಬಳ್ಳಿ:
ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ಹೊರವಲಯ ಕಣಿವೆಯಲ್ಲಿ ಯುವಕನೋರ್ವ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಶಶಾಂಕ ಮಾಗಡಿ (21) ಮೃತನಾದ ಯುವಕ. ತಂದೆ ನಡೆಸುತ್ತಿದ್ದ ಕಂಪ್ಯೂಟರ್ ಸೆಂಟರ್ ಹೋಗಿ ಬರುತ್ತೇನೆ ಎಂದು ಫೆ. 28 ರಂದು ಹೇಳಿ ಹೋದವನ್ನು ಮನೆಗೆ ಬರದೆ ಕಾಣೆಯಾಗಿದ. ಶಶಾಂಕನಿಗಾಗಿ ಕುಟುಂಬಸ್ಥರು ಎಲ್ಲೆಡೆ ಹುಡುಕಾಟ ನಡೆಸುತ್ತಿದ್ದರು. ಗುರುವಾರ ಊರಿನ ಕಣಿವೆಯಲ್ಲಿ ಶವವೊಂದು ತೇಲಾಡುತ್ತಿರುವುದನ್ನು ಗಮನಿಸಿದ ದಾರಿಹೋಕರು ಮೃತ ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದಾರೆ. ತದನಂತರ ಮೃತದೇಹವನ್ನು ಕುಟುಂಬಸ್ಥರು ಗುರುತು ಮಾಡಿದ್ದಾರೆ. ಘಟನೆಗೆ ಕುರಿತು ಹುಬ್ಬಳ್ಳಿ ಗ್ರಾಮೀಣ ಪೋಲಿಸರಿಗೆ ಮಾಹಿತಿ ನೀಡಿದ್ದು, ಪೋಲಿಸರು ಮೃತ ಶವವನ್ನು ಹೊರಗೆ ತೆಗೆದು ಪರಿಶೀಲನೆ ಕೈಗೊಂಡಿದ್ದಾರೆ