ಹೊಸದಿಗಂತ ಡಿಜಿಟಲ್ ಡೆಸ್ಕ್:
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಹೋಳಿ ಆಟವಾಡಿ ಕೆರೆಯಲ್ಲಿ ಸ್ನಾನಕ್ಕೆ ಹೋದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ದೇವೇಂದ್ರ ರಾಚನಗೌಡ (16) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಊರಲ್ಲಿ ಬಣ್ಣದ ಹೋಳಿ ಆಟವಾಡಿದ್ದಾನೆ. ನಂತರ ನಾಲ್ಕು ಜನ ಸ್ನೇಹಿತರು ಒಟ್ಟಾಗಿ ಕೆರೆಗೆ ಈಜಲು ಹೋಗಿದ್ದರು. ದೇವೇಂದ್ರ ಕೆರೆಯ ಮಧ್ಯಭಾಗದ ಕೆಸರಿನಲ್ಲಿ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯನಡೆಸಿದ್ದಾರೆ. ನಂತರ ಸಿಬ್ಬಂದಿ ಬಾಲಕನ ಮೃತ ದೇಹ ಹೊರತೆಗೆದಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.