ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುತ್ಯಾಲಮ್ಮ ಜಾತ್ರೆಯಲ್ಲಿ ಆಟವಾಡಿ ಮನೆಗೆ ತೆರಳಿದ್ದ ಬಾಲಕ ಇದ್ದಕ್ಕಿಂತೆಯೇ ಅಸ್ವಸ್ಥನಾಗಿ ಮೃತಪಟ್ಟಿದ್ದಾನೆ.
ಶಾಂತಿನಗರ ನಿವಾಸಿ ಮಂಜುನಾಥ್ ಅವರ ಪುತ್ರ ಶ್ರೇಯಸ್ ಜಾತ್ರೆಯಲ್ಲಿ ಆಟವಾಡಿದ್ದಾನೆ, ಮನೆಗೆ ಬಂದ ನಂತರ ಏಕಾಏಕಿ ಸುಸ್ತಾಗಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ.
ಶ್ರೇಯಸ್ ಸಾವಿಗೆ ಲೋ ಬಿಪಿ ಕಾರಣ ಎಂದು ಪೋಷಕರು ಹೇಳಿದ್ದಾರೆ.