ರಾಕೇಶ್ ಟಿಕಾಯಿತ್ ​ಗೆ ಮಸಿ ಬಳಿದ ಪ್ರಕರಣ: ಚಾರ್ಜ್​ಶೀಟ್​ನಲ್ಲಿ ದಾಖಲಾಯಿತು ಆರೋಪಿಗಳ ಹೇಳಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನಲ್ಲಿ ಕಿಸಾನ್​ ಯೂನಿಯನ್​ ಮುಖಂಡ ರಾಕೇಶ್ ಟಿಕಾಯಿತ್ ಮೇಲೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಹೈಗ್ರೌಂಡ್ಸ್ ಪೊಲೀಸರು 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

ಒಟ್ಟು 450 ಪುಟದ ಚಾರ್ಜ್​ಶೀಟ್​​ನಲ್ಲಿ 20 ಮಂದಿ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ದಾಖಲಿಸಲಾಗಿದ್ದು, 89 ಜನರನ್ನು ಸಾಕ್ಷಿಯನ್ನಾಗಿಸಿದೆ. ಭರತ್ ಶೆಟ್ಟಿ ಸಹಚರರಾದ ಶಿವಕುಮಾರ್, ಪ್ರದೀಪ್ ಕುಮಾರ್ ಹಾಗೂ ಉಮಾದೇವಿ ಆರೋಪಿಗಳಾಗಿದ್ದಾರೆ.

ಭರತ್ ಶೆಟ್ಟಿಗೆ ಜಾಮೀನು ಸಿಕ್ಕಿದ್ದು, ಅವರ ಹೇಳಿಕೆಯನ್ನೂ ಚಾರ್ಜ್​ಶೀಟ್​ನಲ್ಲಿ ದಾಖಲಿಸಲಾಗಿದೆ. ಅದರ ಪ್ರಕಾರ ರಾಜ್ಯದಲ್ಲಿ ತಾವು ಹೆಸರು ಮಾಡಬೇಕೆಂಬ ಉದ್ದೇಶದಿಂದ ರೈತ ನಾಯಕನಿಗೆ ಮಸಿ ಬಳಿದಿರುವುದಾಗಿ ಹೇಳಿ ಕೊಂಡಿದ್ದಾರೆ.

ಟಿಕಾಯಿತ್​ ರಾಜ್ಯಕ್ಕೆ ಬರುವುದಕ್ಕೂ ಒಂದು ವಾರ ಮೊದಲು ವಿರೋಧಿಸುವ ಬಗ್ಗೆ ಯೋಜನೆ ರೂಪಿಸಲಾಗಿತ್ತು. ಮೊದಲು ಟೊಮೆಟೊ ಹಾಗೂ ಕೊಳೆತ ಮೊಟ್ಟೆಯಲ್ಲಿ ಹೊಡೆಯುವುದರ ಬಗ್ಗೆ ನಿರ್ಧರಿಸಲಾಗಿತ್ತು. ಅದು ಸಾಧ್ಯವಾಗದೇ ಇದ್ದಲ್ಲಿ ಗಾಂಧಿಭವನದಲ್ಲಿ ಮಸಿ ಬಳಿಯಲು ತಂತ್ರ ರೂಪಿಸಲಾಗಿತ್ತು. ಆದರೆ ಹಲ್ಲೆ ಮಾಡುವ ಉದ್ದೇಶ ಆರೋಪಿಗಳಿಗಿರಲಿಲ್ಲ. , ಆರೋಪಿಗಳಲ್ಲಿ ಒಬ್ಬರಾದ ಶಿವಕುಮಾರ್ ಉದ್ವೇಗದಲ್ಲಿ ಮಾಧ್ಯಮದ ಮೈಕನ್ನು ಕಿತ್ತು ಹಲ್ಲೆ ಮಾಡಿದ್ದರು ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!