ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿಗಣತಿ ವರದಿ 2013ರಲ್ಲಿ ಸಿದ್ದರಾಮಯ್ಯ ಸರ್ಕಾರ ನಡೆಸಿದ ಕರ್ನಾಟಕ ಸಾಮಾಜಿಕ-ಆರ್ಥಿಕ ಸಮೀಕ್ಷೆ ಹಿಂದುಳಿದ ಸಮಾಜಗಳ ಸಬಲೀಕರಣಕ್ಕಾಗಿ ಅಹಿಂದ ನಾಯಕ ಕೈಗೊಂಡ ಮಹತ್ವದ ನಿರ್ಧಾರ. ಆದರೆ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಅವರ ನಡೆಸಿದ್ದ ಜಾತಿ ಗಣತಿ ವರದಿ ಕೊನೆಗೂ ಸರ್ಕಾರದ ಕೈ ಸೇರುವ ಸಮಯ ಬಂದಿದೆ.
ಸಿದ್ದರಾಮಯ್ಯ ಸರ್ಕಾರದ ಜಾತಿ ಗಣತಿ ವರದಿ ಕುರಿತು ಚರ್ಚೆ ಮುಂದುವರಿದಿದೆ. ಸರ್ಕಾರ ಪಾರದರ್ಶಕವಾಗಿ ಸಮೀಕ್ಷೆ ನಡೆಸಿಲ್ಲ ಎಂಬ ಆರೋಪವೂ ಇದೆ. ಕಾಂತರಾಜು ವರದಿ ಅನುಷ್ಠಾನಕ್ಕೆ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಹತ್ವದ ಜಾತಿ ಗಣತಿ ವರದಿ ಇಂದು ಸಿಎಂ ಸಿದ್ದರಾಮಯ್ಯ ಅವರ ಕೈಸೇರುವ ಸೂಚನೆ ಇದೀಗ ವ್ಯಕ್ತವಾಗಿದೆ.