ಅನ್ನದಾತನಿಗೆ ಖುಷಿ ವಿಷಯ, ಒಂದನೇ ಕಂತಿನ ಬೆಳೆ ಪರಿಹಾರ ಘೋಷಿಸಿದ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬರುವವರೆಗೂ ಕಾಯೋದಿಲ್ಲ, ನಮ್ಮ ರೈತರ ಕಾಳಜಿ ಮಾಡಲೇಬೇಕಿದೆ, ಇದೀಗ ಒಂದನೇ ಕಂತಿನಲ್ಲಿ ಎರಡು ಸಾವಿರ ರೂಪಾಯಿವರೆಗೆ ಬೆಳೆ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಒಟ್ಟಾರೆ ರಾಜ್ಯದಲ್ಲಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಇದರಲ್ಲಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಕೇಂದ್ರಕ್ಕೆ ಪರಿಹಾರ ಕೇಳಿ ಪತ್ರ ಬರೆದಾಗಿದೆ. ಯಾವುದೇ ಸ್ಪಂದನೆ ನೀಡಿಲ್ಲ. ಇನ್ನು ರಾಜ್ಯದ ಕೆಲ ನಾಯಕರು ಖುದ್ದು ಹೋಗಿ ಭೇಟಿ ಮಾಡಿ ಸಮಸ್ಯೆ ವಿವರಿಸಿದ್ದಾರೆ. ಅಂತಹ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!