ಕೇಂದ್ರ ಸಚಿವರ ಕಾರ್ಯವನ್ನು ಪ್ರಶಂಸಿಸಿದ ಕಾಂಗ್ರೆಸ್ ಮುಖ್ಯಮಂತ್ರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಸ್ಥಾನದ ವಿದ್ಯುತ್‌ ಸಮಸ್ಯೆ ಬಗೆಹರಿಸುವಲ್ಲಿ ರಚನಾತ್ಮಕ ಹಾಗೂ ಧನಾತ್ಮಕವಾಗಿ ಕೇಂದ್ರ ಸಂಸದೀಯ ವ್ಯವಹಾರಗಳು ಗಣಿ ಮತ್ತು ಕಲ್ಲಿದ್ದಲು ಇಲಾಖೆ ಸಚಿವ ಪ್ರಲ್ಹಾದ ಜೋಶಿಯವರು ಸ್ಪಂದನೆ ನೀಡಿದ್ದಾರೆಂದು ರಾಜಸ್ಥಾನ ಮುಖ್ಯಮಂತ್ರಿ ಆಶೋಕ್ ಗೆಲ್ಲೋಟ್ ಅವರು ಹೇಳಿದ್ದಾರೆ.

ಕೇಂದ್ರದ ಕೋಲ್ ಇಂಡಿಯಾ ಲಿ., ಹಾಗೂ ರಾಜಸ್ಥಾನದ ಆ‌.ಆ‌.ವಿ.ಯು.ಎನ್.ಎಲ್. ರಾಜಸ್ಥಾನ್ ವಿದ್ಯುತ್ ಉತ್ಪಾದನಾ ನಿಗಮ ಲಿ., ದೊಂದಿಗೆ 1190 ಮೆಗಾವ್ಯಾಟ್ ವಿದ್ಯುತ್‌ ಉತ್ಪಾದನೆ, ಸಂಬಂಧಿ ನಡೆದ ಪರಸ್ಪರ ಒಡಂಬಡಿಕೆ ಪತ್ರಕ್ಕೆ ಅಂಕಿತ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜಸ್ಥಾನದಲ್ಲಿ ವಿದ್ಯುತ್‌ ಸಮಸ್ಯೆ ಇದ್ದಾಗ ಛತ್ತೀಸ್‌ ಗಡದಲ್ಲಿರುವ ಕಲ್ಲಿದ್ದಲಿನ ಪ್ರಾಧಿಕಾರಗಳೂ ಕೂಡಾ ನೀಡಿದ ಸಹಾಯ ಸಹಕಾರವನ್ನು ಮೋದಿ ಸರಕಾರದ ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ರಾಜಸ್ಥಾನ ಸರಕಾರಕ್ಕೆ ನೀಡುತ್ತಿದ್ದಾರೆ. ರಾಜಸ್ಥಾನದ ವಿದ್ಯುತ್‌ ಬರ ನೀಗಿಸುವಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಕಾರಾತ್ಮಕ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!