ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಪರಿಷತ್ ಖಾಲಿ ಇರುವ ನಾಮ ನಿರ್ದೇಶಿತ ಸದಸ್ಯರ ಸ್ಥಾನಗಳ ಭರ್ತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದ್ದು, ಮೂವರ ಹೆಸರು ಅಂತಿಮಗೊಳಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಮಾಜಿ ಸಚಿವೆ ಉಮಾಶ್ರೀ, ಮಾಜಿ ಸಚಿವ ಎಂ.ಆರ್ ಸೀತಾರಾಂ ಹೆಸರು ಫೈಲನ್ ಮಾಡಿದ್ದಾರೆ ಎನ್ನಲಾಗಿದೆ. ಇದಲ್ಲದೇ ಮಾಜಿ ಇಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರು ಬಹುತೇಕ ಫೈನಲ್ ಎನ್ನಲಾಗುತ್ತಿದೆ.
ಆ ಬಗ್ಗೆ ಸೋಮವಾರದೊಳಗೆ ಖಚಿತ ಮಾಹಿತಿ ಹೊರ ಬೀಳುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಕಾದು ನೋಡಬೇಕಿದೆ.