ಹೊಸದಿಗಂತ ವರದಿ, ಗದಗ
ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಘೋಷಣೆ ಮಾಡಿದರೆ ಆ ಕ್ಷಣವೇ ಕಾಂಗ್ರೆಸ್ ನಿರ್ನಾಮ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ ಶೆಟ್ಟರ ಅವರು ಭವಿಷ್ಯ ನುಡಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ಅವರು ಪರಸ್ಪರ ಬಡಿದಾಡಿಕೊಳ್ಳುತ್ತಿದ್ದಾರೆ. ಆರ್ಎಸ್ಎಸ್ ನಂತಹ ಶ್ರೇಷ್ಠ ಸಂಘಟನೆ ಜಗತ್ತಿನಲ್ಲಿಯೇ ಇಲ್ಲ ಆದರೆ, ಕಾಂಗ್ರೆಸ್ ಮುಖಂಡರಿಗೆ ಆರ್ಎಸ್ಎಸ್ನ್ನು ಟೀಕೆ ಮಾಡದಿದ್ದರೆ ಊಟ ಜೀರ್ಣವಾಗುವದಿಲ್ಲ. ಆರ್ಎಸ್ಎಸ್ನ್ನು ಟೀಕೆ ಮಾಡಿದರೆ ಅಲ್ಪಸಂಖ್ಯಾತರ ಮತಗಳನ್ನು ಪಡೆಯಬಹುದು ಎಂಭ ಭ್ರಮೆ ಕಾಂಗ್ರೆಸ್ನಲ್ಲಿದೆ. ಆದರೆ, ಈಗಾಗಲೇ ಮತದಾರರು ಉತ್ತರಪ್ರದೇಶದಲ್ಲಿ ಉತ್ತರ ನೀಡಿದ್ದಾರೆ. ಅದೇರೀತಿ ಪಂಜಾಬ್ನಲ್ಲಿ ಕಾಂಗ್ರೆಸ್ನ್ನು ತೊಳೆದು ನವಜೋತಸಿಂಗ್ ಸಿಧು ಅವರು ಜೈಲು ಪಾಲಾಗಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ ಎಂದು ವ್ಯಂಗ್ಯವಾಡಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ