ನಿಗದಿಯಾಯಿತು ದಿನಾಂಕ: ಎಲ್ಲರ ಚಿತ್ತ ಈಗ ಬಿಜೆಪಿ ಮೂರನೇ ಪಟ್ಟಿಯತ್ತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಮಾ.22ರಂದು ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ಮಾಡಿ ಅಂತಿಮವಾದ ಪಟ್ಟಿ ಬಿಡುಗಡೆ ಮಾಡುತ್ತೇವೆ. ಐದು ಕ್ಷೇತ್ರಗಳ ಬಗ್ಗೆ ಯಾವುದೇ ಗೊಂದಲ ಇಲ್ಲ, ಮೂರನೇ ಪಟ್ಟಿ ಬಿಡುಗಡೆ ಮಾಡಿದ ನಂತರ ರಾಜ್ಯಾದ್ಯಂತ ಪ್ರವಾಸ ನಡೆಸಲಾಗುತ್ತದೆ ಎಂದಿದ್ದಾರೆ.

ಅಸಮಾಧಾನಿತ ನಾಯಕರ ಜೊತೆ ಮಾತನಾಡುತ್ತೇವೆ. ಈಗಾಗಲೇ ಸಂಗಣ್ಣ ಕರಡಿ ಜೊತೆ ಮಾತನಾಡಿದ್ದೇನೆ, ಅವರು ನಮ್ಮ ಜೊತೆ ಇರುವ ವಿಶ್ವಾಸ ಇದೆ. ಇನ್ನು ಮಾಧುಸ್ವಾಮಿ ಅವರ ಬಳಿ ಮಾತನಾಡುತ್ತೇನೆ. ಈಶ್ವರಪ್ಪ ಸ್ಪರ್ಧೆ ಮಾಡುವ ಬಗ್ಗೆ ನಾನು ಮಾತನಾಡೋದಿಲ್ಲ. ಎಲ್ಲರೂ ಅವರಿಗೆ ಬೇಡ ಎಂದೇ ಹೇಳಿದ್ದಾರೆ. ನೋಡೋಣ ಎಂದಿದ್ದಾರೆ.

ಈಶ್ವರಪ್ಪರ ಮಗನಿಗೆ ಟಿಕೆಟ್ ಸಿಗದ ಸಿಟ್ಟಿನಲ್ಲಿ ವಿಜಯೇಂದ್ರ ಬಗ್ಗೆ ಮಾತನಾಡ್ತಿದ್ದಾರೆ. ವೈಯಕ್ತಿಕ ಹೇಳಿಕೆಗಳಿಗೆ ಉತ್ತರ ಕೊಡೋದಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!