ಹೊಸದಿಗಂತ ವರದಿ,ಕುಶಾಲನಗರ:
ಹಾಸನ-ಕುಶಾಲನಗರ ಹೆದ್ದಾರಿಯ ಹೆಬ್ಬಾಲೆ ಮುಖ್ಯ ರಸ್ತೆಯ ಬದಿಯಲ್ಲಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ತೋಕೂರು ಗ್ರಾಮದ ವಿಕ್ಟರ್ ಫೆಲಿಕ್ಸ್ ಡಿಸೋಜ (68) ಎಂಬವರೇ ಮೃತ ದುರ್ದೈವಿ.
ಭೈರಪ್ಪನಗುಡಿ ಗ್ರಾಮದಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಅವರಿಗೆ ಕಳೆದ ರಾತ್ರಿ ಹೆಬ್ಬಾಲೆ ಮುಖ್ಯ ರಸ್ತೆಯಲ್ಲಿ ಯಾವುದೋ ವಾಹನ ಡಿಕ್ಕಿಯಾಗಿ ಅವರು ಮೃತ ಪಟ್ಟಿರಬಹುದೆಂದು ಶಂಕಿಸಲಾಗಿದೆ.
ಕುಶಾಲನಗರದ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳ ತಂಡ ಸ್ಧಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಕುಶಾಲನಗರದ ಶವಾಗಾರದಲ್ಲಿ ಇರಿಸಲಾಗಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.