ಕಾರಿನ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ‌ ಚಾಲಕನ ಮೃತದೇಹ ಪತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಚಾಲಕರೋರ್ವರು ತನ್ನ ಕಾರಿನಲ್ಲಿ‌ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಕೆ.ಸಿ.ರೋಡ್ ನಲ್ಲಿ ನಡೆದಿದೆ.ಗೋಳ್ತಮಜಲು ಗ್ರಾಮದ ‌ಹೊಸೈಮಾರ್ ನಿವಾಸಿ ಜಗದೀಶ್ ಮೃತಪಟ್ಟವರೆಂದು ಗುರುತಿಸಲಾಗಿದೆ.

ವೃತ್ತಿಯಲ್ಲಿ ಚಾಲಕನಾಗಿರುವ‌ ಜಗದೀಶ್ , ಕೆಲ ವರ್ಷಗಳ ಹಿಂದೆ ವಿಡಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು.

ಭಾನುವಾರ ಬೆಳಿಗ್ಗೆ ಬಾವ ಹಾಗೂ ಜೊತೆ ಮಂಗಳೂರಿನ ಬಜಾಲ್ ನಲ್ಲಿರುವ ತರವಾಡು ಮನೆಯಲ್ಲಿ ದೈವದ ಕಾರ್ಯಕ್ಕೆ ಹೋಗಿದ್ದರು.ಮಧ್ಯಾಹ್ನ ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕಬಳಿ ಕಾರು ನಿಲ್ಲಿಸಿ ನನಗೆ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ನೀವು ‌‌ಮಕ್ಕಳ ಜೊತೆ ಮನೆಗೆ ಹೋಗಿ ನಾನು ಮತ್ತೆ ಬರುವುದಾಗಿ ಹೇಳಿ ಅವರನ್ನು ‌ಕಳುಹಿಸಿಕೊಟ್ಟು, ಕಾರಿನ ಸೀಟಿನಲ್ಲಿಯೇ ಮಲಗಿದ್ದರು.

ರಾತ್ರಿ ಯಾದರೂ ಜಗದೀಶ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಬಾವಾ ಹಾಗೂ ಮನೆಯವರು ಬಂದು ನೋಡಿದಾಗ ನಿಂತಿದ್ದ ಕಾರಿನ ಸೀಟಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿರುವುದು ಕಂಡುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!