ಹೊಸದಿಗಂತ ವರದಿ, ಶಿವಮೊಗ್ಗ:
ತೀರ್ಥಹಳ್ಳಿಗೆ ಅಪರಾಧ ಪ್ರಕರಣವೊಂದರ ತನಿಖೆಗೆ ಬಂದಿದ್ದ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸಂತೋಷ್ (36) ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ.
ಕ್ರಿಮಿನಲ್ ಪ್ರಕರಣವೊಂದರ ಸಂಬಂಧ ತೀರ್ಥಹಳ್ಳಿಗೆ ಬಂದಿದ್ದಾಗ ಹೆಡ್ ಕಾನ್ಸ್ಟೇಬಲ್ ಸಂತೋಷ್ ಅವರಿಗೆ ಮಂಗಳವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ.
ಇವರು ಮೂಲತಃ ಸೊರಬ ತಾಲ್ಲೂಕಿನ
ಆನವಟ್ಟಿ ಸಮೀಪದ ತಿಮ್ಮಪ್ಪನೂರಿನವರು ಎನ್ನಲಾಗಿದೆ.
ಇವರ ಪತ್ನಿ ದೇವಂಗಿ ಸಮೀಪದ ಹಿಲಿಕೇರೆ ಯಲ್ಲಿ ಅರಣ್ಯ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.