ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿ- ಅಂಕೋಲ ರೈಲ್ವೆ ಯೋಜನೆಗೆ ಇಲಾಖೆಯಿಂದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆಗಿರುವ ವಿರೋಧಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ತಮ್ಮ ಅವಧಿಯಲ್ಲಿಯೇ ಇದನ್ನು ಕಾರ್ಯಗತಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಧಾರವಾಡ ಬೆಳಗಾವಿ ರೈಲು ಯೋಜನೆಗೆ ಭೂ ಸ್ಬಾಧಿನಪ್ರಕ್ರಿಯೇ ನಡೆದಿದೆ ಎಂದು ಹೇಳಿದ್ದಾರೆ.