ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ಶ್ರೀರಾಮನನ್ನು ಪ್ರತಿಷ್ಠಾಪಿಸಿದ ನಂತರ, ಸರ್ಕಾರವು ಬಾಬಾಬುಡನ್ ಗಿರಿಯಲ್ಲಿರುವ ದತ್ತಪೀಠದಲ್ಲಿ ಪೂಜಾ ಕ್ಷೇತ್ರವನ್ನು ನಿರ್ಬಂಧಿಸಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಡಿಸಿ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಹಿಂದೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಸದ್ಯ ಸ್ಥಳದಲ್ಲಿ ಬಿಗುವಿನ ವಾರಾವರಣ ಏರ್ಪಟ್ಟಿದೆ.
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ನಿಮಿತ್ತ ದತ್ತಪೀಠ ವ್ಯವಸ್ಥಾಪನಾ ಸಮಿತಿಯು ಬಾಬಾಬುಡನ್ ಗಿರಿಯಲ್ಲಿರುವ ದತ್ತಪೀಠದಲ್ಲಿ ವಿಶೇಷ ಪೂಜೆಯನ್ನು ಆಯೋಜಿಸಿತ್ತು. ರಾಮತಾರಕ ಹೋಮ ನೆರವೇರಿಸಲು ಸಕಲ ವ್ಯವಸ್ಥೆ ಮಾಡಲಾಗಿದೆ. ಆದರೆ, ಜಿಲ್ಲಾಡಳಿತ ದತ್ತಪೀಠದಲ್ಲಿ ಪ್ರಾರ್ಥನೆಗೆ ಅವಕಾಶ ನೀಡದಂತೆ ನಿರ್ಬಂಧ ವಿಧಿಸಿ ಯಾಗ ಶಾಲೆ ಮುಚ್ಚಿದೆ. ಮುಜರಾಯಿ ಇಲಾಖೆಗೆ ವಿವಾದಿತ ಇನಾಂ ದತ್ತಾತ್ರೇಯ ಪೀಠ ಸೇರಿದೆ. ಮುಜರಾಯಿ ದೇವಾಲಯದಲ್ಲಿ ಪೂಜೆಗೆ ಸರ್ಕಾರ ಅದೇಶ ನೀಡಿತ್ತು. ರಾಜ್ಯ ಸರ್ಕಾರದ ಈ ದ್ವಂದ್ವ ನೀತಿಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಹೀಗಾಗಿ ಸಂಘಟನೆಯ ಕಾರ್ಯಕರ್ತರು ದತ್ತಪೀಠ ಚಲೋ ಎಂದು ಅಂತ ಹೋಗುವಾಗ ಪೊಲೀಸರು ಕಾರ್ಯಕರ್ತರನ್ನ ಬಂಧಿಸಲು ಮುಂದಾಗಿದ್ದಾರೆ. ಸಂಘಟನೆಯ ಮತ್ತೊಂದು ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದ್ದು ಪೊಲೀಸರು ಮತ್ತು ಸಂಘಟನೆಯ ಮಧ್ಯೆ ಭಾರೀ ಗಲಾಟೆ ನಡೆದಿದೆ. ಹೀಗಾಗಿ ರಸ್ತೆಯಲ್ಲಿ ಬಿದ್ದು ಸಂಘಟನೆಯ ಕಾರ್ಯಕರ್ತರು ಹೊರಳಾಡಿದ್ದಾರೆ.