ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಮುಗಿದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಕುಟುಂಬಸ್ಥರು ವಿಶ್ರಾಂತಿಗಾಗಿ ಇಂದು ಎನ್.ಆರ್.ಪುರ ತಾಲೂಕಿನ ಕತ್ಲೇಖಾನ್ ಎಸ್ಟೇಟ್ಗೆ ಚಿಕ್ಕಮಗಳೂರಿನಿಂದ ತೆರಳಿದ್ದಾರೆ.
ಲೋಕಸಭಾ ಚುನಾವಣೆ ನಂತರ ಡಿಕೆಶಿ ಫ್ಯಾಮಿಲಿ ರಿಲ್ಯಾಕ್ಸ್ ಮೋಡ್ಗೆ ಜಾರಿದ್ದು,
ಚಿಕ್ಕಮಗಳೂರು ನಗರದ ಐ.ಡಿ.ಎಸ್.ಜಿ. ಕಾಲೇಜು ಆವರಣದಿಂದ ಹೆಲಿಕಾಪ್ಟರ್ ಮೂಲಕ ಪತ್ನಿ ಉಷಾ, ಪುತ್ರಿ ಐಶ್ವರ್ಯಾ, ಅಳಿಯ ಅಮರ್ಥ್ಯ ಅವರು ತೆರಳಿದರು. ಡಿಕೆ ಶಿವಕುಮಾರ್ ಬುಧವಾರ ಬೆಳಗ್ಗೆಯೇ ನೇರವಾಗಿ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕೆಫೆ ಕಾಫಿ ಡೇ ಮಾಲಕ ಸಿದ್ಧಾರ್ಥ್ ಪುತ್ರ ಅಮರ್ಥ್ಯ ಒಡೆತನದಲ್ಲಿರುವ ಎಸ್ಟೇಟ್ಗೆ ತಲುಪಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಕಾರಿನಲ್ಲಿ ಚಿಕ್ಕಮಗಳೂರು ಹೊರವಲಯದಲ್ಲಿರುವ ಸೆರಾಯ್ ರೆಸಾರ್ಟ್ಗೆ ಆಗಮಿಸಿದ್ದರು.