ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದಲ್ಲಿ ವೈದ್ಯರೊಬ್ಬರ ನಿರ್ಲಕ್ಷ್ಯದಿಂದ ಮಹಿಳೆ ಹೊಟ್ಟೆಯೊಳಗೆ ಸ್ಪಾಂಜ್ ಉಳಿದಿದೆ. ಇದಕ್ಕೆ ಶ್ರೀ ಪೊಟ್ಟಿ ಶ್ರೀರಾಮುಲು ನೆಲ್ಲೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಜಿಂಕಾರೆಡ್ಡಿ ಶೇಖರ್ ತೀರ್ಪು ನೀಡಿದ್ದಾರೆ.
ತಮಿಳುನಾಡಿನ ವೆಲ್ಲೂರು ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿ ತೀರ್ಪಿನ ಅನ್ವಯ ಇದೀಗ 14 ಲಕ್ಷ ರೂ. ಪರಿಹಾರ ನೀಡಬೇಕಿದೆ. ಶಸ್ತ್ರಚಿಕಿತ್ಸೆ ಮಾಡಿ ಹೊಟ್ಟೆಯೊಳಗೆ ಕಾಟನ್ ಸ್ಪಾಂಜ್ ಹಾಗೇ ಬಿಟ್ಟಿದ್ದಾರೆ. ಇದರಿಂದ ಮಹಿಳೆಗೆ ಹೊಟ್ಟೆನೋವು ಕಾಣಿಸಿದೆ.
ಎಷ್ಟೇ ಆಸ್ಪತ್ರೆಗೆ ತೋರಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ನೆಲ್ಲೂರು ಕಿಮ್ಸ್ ಆಸ್ಪತ್ರೆಯಲ್ಲಿ ಹೊಟ್ಟೆಯಲ್ಲಿ ಸ್ಪಾಂಜ್ ಇರುವ ವಿಷಯ ತಿಳಿದಿದೆ. ಶಸ್ತ್ರಚಿಕಿತ್ಸೆ ನಡೆಸಿ ಅದನ್ನು ಹೊರತೆಗೆಯಲಾಗಿದೆ.
ಸಿಜೇರಿಯನ್ ಹೆರಿಗೆ ವೇಳೆ ಸ್ಪಾಂಜ್ ಹಾಗೇ ಬಿಟ್ಟು ಹೊಲಿಗೆ ಹಾಕಲಾಗಿದೆ. ಹೊಟ್ಟೆಯಲ್ಲಿ ಗಡ್ಡೆ ಬೆಳೆದು ಮಹಿಳೆಗೆ ಹೊಟ್ಟೆನೋವು ಶುರುವಾಗಿತ್ತು. ನೆಲ್ಲೂರು ಗ್ರಾಹಕರ ಆಯೋಗದಲ್ಲಿ ಪ್ರಕರಣ ದಾಖಲಾಗಿತ್ತು.