ಕ್ರಿಕೆಟಿಗ ರಿಷಬ್ ಪಂತ್ ಸಹಾಯಕ್ಕೆ ಬಂದ ಚಾಲಕ- ಕಂಡಕ್ಟರ್: ಜ.26 ರಂದು ಉತ್ತರಾಖಂಡ್ ಸರಕಾರದಿಂದ ಸನ್ಮಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಅವರ ಅಪಘಾತದ ವೇಳೆ ಜೀವ ಉಳಿಸಲು ನೆರವಾದ ಹರ್ಯಾಣ ರೋಡ್‌ವೇಸ್‌ನ ಚಾಲಕ ಸುನೀಲ್ ಕುಮಾರ್ ಮತ್ತು ಕಂಡಕ್ಟರ್ ಪರಂಜೀತ್ ಅವರನ್ನುಜನವರಿ 26 ರಂದು ಅಂದರೆ ಗಣರಾಜ್ಯೋತ್ಸವದಂದು ನಮ್ಮ ಸರ್ಕಾರ ಸನ್ಮಾನಿಸಲಿದೆ ಎಂದು ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ದೆಹಲಿಯಿಂದ ಉತ್ತರಾಖಂಡ್​ಗೆ ಹೊರಟಿದ್ದ ಪಂತ್ ಭೀಕರ ಕಾರು ಅಪಘಾತಕ್ಕೀಡಾಗಿದ್ದರು. ಪಂತ್ ಬದುಕುಳಿದಿದ್ದೆ ಪವಾಡದಂತಿದೆ. ಈ ಅಪಘಾತದ ನಡುವೆಯೂ ಜೀವ ಉಳಿಸಿಕೊಳ್ಳುವ ಸಲುವಾಗಿ ಕಾರಿನಿಂದ ಹೊರಬಂದಿದೆ ಪಂತ್ ಅವರನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಈ ಡ್ರೈವರ್ ಹಾಗೂ ಕಂಡಕ್ಟರ್ ನೆರವಾಗಿದ್ದರು.

ಪಂತ್ ಜೀವ ಉಳಿಸುವಲ್ಲಿ ನೆರವಾಗಿದ್ದ ಹರ್ಯಾಣ ರೋಡ್‌ವೇಸ್‌ನ ಚಾಲಕ ಸುನೀಲ್ ಕುಮಾರ್ ಮತ್ತು ಕಂಡಕ್ಟರ್ ಪರಂಜೀತ್ ಅವರನ್ನು ಹರಿಯಾಣ ರಾಜ್ಯ ಸಾರಿಗೆ ಸಂಸ್ಥೆ ಸನ್ಮಾನಿಸಿದ್ದು, ಇದೀಗ ಉತ್ತರಾಖಂಡ ಸರ್ಕಾರ ಇಬ್ಬರನ್ನೂ ಸನ್ಮಾನಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!