Sunday, June 4, 2023

Latest Posts

ರಂಗೇರುತ್ತಿದೆ ಚುನಾವಣಾ ಅಖಾಡ: ಬೆಂಗಳೂರಿಗೆ ಬಂದಿಳಿದ ಅಮಿತ್ ಶಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚುನಾವಣೆಯ ಹಿನ್ನಲೆ ಅಮಿತ್ ಶಾ ಇದೀಗ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಿದ ಅಮಿತ್ ಶಾ ಗೆ ಸಿಎಂ ಬೊಮ್ಮಾಯಿ ಸ್ವಾಗತ ಕೋರಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪಟ್ಟಣದಲ್ಲಿ ದೇವನಹಳ್ಳಿ ಕ್ಷೇತ್ರಕ್ಕೆ ಸಂಬಂಧಿಸಿದ ರೋಡ್ ಶೋದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಯಲಹಂಕ, ಬಳ್ಳಾರಿ ರಸ್ತೆ,ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ, ಹೆಬ್ಬಾಳ ಜಂಕ್ಷನ್, ಮೇಕ್ರಿ ಸರ್ಕಲ್ ಈ ರಸ್ತೆಗಳಲ್ಲಿ ಸಂಚಾರಕ್ಕೆ ನಿಷೇಧಿಸಲಾಗಿದ್ದು, ಪ್ರಯಾಣಿಕರು ಪರ್ಯಾಯ ರಸ್ತೆಯಲ್ಲಿ ಸಂಚರಿಸಿ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಜೆ 6.10 ರಿಂದ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳುವರು. 22ರಂದು ಬೆಳಿಗ್ಗೆ 10.30ಕ್ಕೆ ಅವರು ನಗರದ ರಿಡ್ಜ್ ಕಾರ್ಲ್ಟನ್ ಹೋಟೆಲ್ನಲ್ಲಿ ‘ಇಂದಿನವರೆಗಿನ ಕರ್ನಾಟಕ ಪಂಚಾಯತ್’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!