ಇಡೀ ರಾಜ್ಯವೇ ನನ್ನ ಕ್ಷೇತ್ರ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

ಹೊಸದಿಗಂತ ವರದಿ, ಕೊಪ್ಪಳ:
ನನ್ನ ರಾಜಕೀಯ ನಡೆ ಕುರಿತಾಗಿ ಹೈಕಮಾಂಡ್ ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಜನರು ಬಯಸಿದಲ್ಲಿ ಹಾಗೂ ಪಕ್ಷ ಟಿಕೆಟ್ ನೀಡಿದಲ್ಲಿ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವೆ‌. ಶಿಕಾರಿಪುರದಿಂದಲೇ ಸ್ಪರ್ಧಿಸಬೇಕೆಂದಿಲ್ಲ. ಇಡೀ ರಾಜ್ಯವೇ ನನ್ನ ಕ್ಷೇತ್ರ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಅಭಿನವ ಬಸವಣ್ಣ ಎಂದು ಖ್ಯಾತರಾದ ಗವಿಶ್ರೀಗಳ ದರ್ಶನ ಪಡೆಯಲು ಕೊಪ್ಪಳಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಶಿಕಾರಿಪುರದೊಂದಿಗೆ ನಮ್ಮ ತಂದೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತರಾದವರನ್ನು ಆಯ್ಕೆ ಮಾಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ. ಯಡಿಯೂರಪ್ಪ ನಲವತ್ತು ವರ್ಷ ಪಕ್ಷಕ್ಕಾಗಿ ದುಡಿದಿದ್ದಾರೆ. ಪಕ್ಷವೂ ಅವರಿಗೆ ಎಲ್ಲಾ ರೀತಿಯ ಸ್ಥಾನಮಾನ ನೀಡಿದೆ. ಕ್ಷೇತ್ರದ ಜನರ ಅಭಿಪ್ರಾಯದಂತೆ ನನಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದಾಗಿ ಹೇಳಿದ್ದಾರೆ ಎಂದರು.
ಗವಿಶ್ರೀಗಳ ಸನ್ನಿಧಾನದ ಕುರಿತಾಗಿ ಮಾತನಾಡಿದ ಅವರು, ಇಲ್ಲಿ ಬಂದರೆ ಬದುಕಿಗೆ ಸ್ಪೂರ್ತಿ ಸಿಗುತ್ತದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!