ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಕುಟುಂಬ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುನೀತ್ ರಾಜ್​ಕುಮಾರ್​ ಅವರಿಗೆ ರಾಜ್ಯ ಸರಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಪುನೀತ್‌ ಪತ್ನಿ ಅಶ್ವಿನಿ ಭಾರವಾದ ಹೃದಯದಲ್ಲೇ ಪ್ರಶಸ್ತಿ ಕರ್ನಾಟಕ ರತ್ನ ಪ್ರಶಸ್ತಿ ಸ್ವೀಕರಿಸಿದರು.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮನೆಗೆ ತೆರಳಿದ ಅಶ್ವಿನಿ ಅವರು ಕರ್ನಾಟಕ ಪ್ರಶಸ್ತಿಯನ್ನು ಪುನೀತ್ ಅವರ ಭಾವಚಿತ್ರಕ್ಕೆ ಅರ್ಪಿಸಿದ್ದು, ಇದೀಗ ಈ ಫೋಟೋ ಫುಲ್ ವೈರಲ್ ಆಗಿದೆ.

ಈ ಪ್ರಶಸ್ತಿಯು 50 ಗ್ರಾಮ್ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಹಾಗೂ ಒಂದು ಶಾಲನ್ನು ಒಳಗೊಂಡಿದ್ದು, ಈಗ ಈ ಚಿನ್ನದ ಪದಕವನ್ನು ಅಪ್ಪು ಫೋಟೋಗೆ ಹಾಕಿದರು.

ಅಶ್ವಿನಿ ಹಾಗು ಪುತ್ರಿ ವಂದಿತಾ ಅವರು ಕರ್ನಾಟಕ ರತ್ನ ಪ್ರಶಸ್ತಿಯನ್ನು ಹಿಡಿದು ಪುನೀತ್ ಭಾವಚಿತ್ರದ ಮುಂದೆ ನಿಂತಿದ್ದು, ಈ ಫೋಟೋ ಹಲವು ಭಾವನಾತ್ಮಕ ಭಾವನೆಗಳನ್ಜು ಹೇಳುವಂತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!