ಜಾರ್ಖಂಡ್‌ನಲ್ಲಿ ಶುರುವಾಗಿದೆ ಕುದುರೆ ವ್ಯಾಪಾರದ ಭೀತಿ: ಸಿಎಂ ನೇತೃತ್ವದಲ್ಲಿ ಶಾಸಕರು ಶಿಫ್ಟ್​!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಾರ್ಖಂಡ್‌ನಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಶಾಸಕ ಸ್ಥಾನದ ಮೇಲೆ ಅನರ್ಹತೆ ತೂಗುಗತ್ತಿ ನೇತಾಡುತ್ತಿದ್ದರೆ ಇತ್ತ ಶಾಸಕರ ಕುದುರೆ ವ್ಯಾಪಾರದ ಭೀತಿ ಶುರುವಾಗಿದೆ.
ಇಂದು ಏಕಾಏಕಿ ಸ್ವತಃ ಮುಖ್ಯಮಂತ್ರಿ ಹೇಮಂತ್ ಸೊರೇನ್ ನೇತೃತ್ವದಲ್ಲೇ ಶಾಸಕರು ರಾಜಧಾನಿ ರಾಂಚಿಯಿಂದ ಕುಂತಿ ಜಿಲ್ಲೆಗೆ ತಮ್ಮ ಮೊಕ್ಕಾಂ ಬದಲಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಜೆಎಂಎಂ, ಕಾಂಗ್ರೆಸ್​ ಹಾಗೂ ಆರ್​ಜೆಡಿ ಪಕ್ಷಗಳ ಮೈತ್ರಿಕೂಟದ ಯುಪಿಎ ಸರ್ಕಾರ ಅಧಿಕಾರದಲ್ಲಿದೆ. 81 ಸದಸ್ಯ ಬಲದ ವಿಧಾನಸಭೆಯಲ್ಲಿ ಜೆಎಂಎಂನ 30 ಶಾಸಕರು, ಕಾಂಗ್ರೆಸ್​ನ 18 ಮತ್ತು ಆರ್​ಜೆಡಿಯ ಒಬ್ಬ ಶಾಸಕರು ಹಾಗೂ ಪ್ರತಿಪಕ್ಷ ಬಿಜೆಪಿಯ 26 ಶಾಸಕರಿದ್ದಾರೆ. ಇದೀಗ ಆಡಳಿತಾರೂಢ ಪಕ್ಷಗಳ ಶಾಸಕರನ್ನು ಕುದುರೆ ವ್ಯಾಪಾರದಿಂದ ರಕ್ಷಿಸಲು ಸ್ಥಳಾಂತರ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ರಾಂಚಿಯಿಂದ ಸಿಎಂ ಹೇಮಂತ್ ಸೊರೇನ್ ನೇತೃತ್ವದಲ್ಲಿ ಕುಂತಿ ಜಿಲ್ಲೆಗೆ ಬಂದಿರುವ ಶಾಸಕರು, ಇಲ್ಲಿನ ಲಟ್ರಟು ಡ್ಯಾಂ ಪ್ರದೇಶದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ರಾಜಧಾನಿ ರಾಂಚಿಯಿಂದ ಕೇವಲ 30 ಕಿಮೀ ದೂರದಲ್ಲಿ ಈ ಡ್ಯಾಂ ಇದ್ದು, ಎಲ್ಲ ಶಾಸಕರು ಇಲ್ಲಿಯ ಅತಿಥಿಗೃಹದಲ್ಲಿ ತಂಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಇಡೀ ಪ್ರದೇಶದಲ್ಲಿ ಭಾರಿ ಪೊಲೀಸ್​ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!