ಸಿಎಂಗೆ 2022-23ನೇ ಸಾಲಿನ ಬಜೆಟ್ ಪ್ರತಿ ಹಸ್ತಾಂತರಿಸಿದ ಹಣಕಾಸು ಇಲಾಖೆ ಅಧಿಕಾರಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಇಂದು ಮಧ್ಯಾಹ್ನ 12.30ಕ್ಕೆ ತಮ್ಮ ಚೊಚ್ಚಲ ಬಜೆಟ್ ಮಂಡಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ಬಜೆಟ್ ಪ್ರತಿಯನ್ನು ಹಸ್ತಾಂತರಿಸಿದರು.

ರೇಸ್ ಕೋರ್ಸ್ ನಿವಾಸದಲ್ಲಿ 2022- 23ನೇ ಸಾಲಿನ ಬಜೆಟ್ ಪ್ರತಿಯನ್ನು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಹಸ್ತಾಂತರ ಮಾಡಿದರು. ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಎನ್. ಪ್ರಸಾದ್, ಕಾರ್ಯದರ್ಶಿಗಳಾದ ಎಕ್ ರೂಪ್ ಕೌರ್, ಪಿ.ಸಿ. ಜಾಫರ್ ಅವರು ಪ್ರತಿಯನ್ನು ಸಿಎಂ ಕೈಗಿತ್ತರು.

ಈ ವೇಳೆ ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಬೈರತಿ ಬಸವರಾಜ ಉಪಸ್ಥಿತರಿದ್ದರು.

ಅದಕ್ಕೂ ಮೊದಲು ಮುಖ್ಯಮಂತ್ರಿಗಳು ಬಾಲಬ್ರೂಯಿ ವಸತಿಗೃಹದ ಪಕ್ಕದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಇಲ್ಲಿಯೂ ಸಮಸ್ತ ರಾಜ್ಯದ ಜನತೆ ಹೆಸರಿನಲ್ಲಿ ಅರ್ಚನೆ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!