ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ರಾಜ್ಯದಲ್ಲಿ ನೂತನ ಸರ್ಕಾರದ ಆಳ್ವಿಕೆ ಆರಂಭವಾಗಲಿದೆ, ಇನ್ನೇನು ಕೆಲವೇ ಗಂಟೆಗಳಲ್ಲಿ ಸಿದ್ದರಾಮಯ್ಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಂತರ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮೊದಲ ಸಂಪುಟ ಸಭೆ ನಡೆಯಲಿದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಗ್ಯಾರೆಂಟಿ ಘೋಷಣೆಗಳನ್ನು ಮಾಡಿದ್ದು, ಎಲ್ಲರ ಕಣ್ಣು ಈ ಗ್ಯಾರೆಂಟಿಗಳ ಮೇಲೆಯೇ ಇದೆ.
ಯಾವ್ಯಾವ ಗ್ಯಾರೆಂಟಿ?
- ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ
- ಪ್ರತಿ ತಿಂಗಳು ಗೃಹ ಬಳಕೆಯ 200 ಯುನಿಟ್ವರೆಗೆ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆ
- ಪಧವೀಧರರಿಗೆ ಮೂರು ಸಾವಿರ ರೂಪಾಯಿ ಹಾಗೂ ಡಿಪ್ಲಮಾ ಪದವೀಧರರಿಗೆ 1,500 ರೂಪಾಯಿ ವೇತನ
- ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ
- ಬಿಪಿಎಲ್ ಕಾರ್ಡುದಾರರಿಗೆ ತಿಂಗಳಿಗೆ 10 ಕೆ.ಜಿ ಅಕ್ಕಿ
ತಮ್ಮ ಸರ್ಕಾರ ರಚನೆಯಾದ ಮೊದಲ ಸಂಪುಟದಲ್ಲೇ ಈ ಐದು ಗ್ಯಾರೆಂಟಿಗಳನ್ನು ಜಾರಿ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಹಾಗಾಗಿ ಕಾಂಗ್ರೆಸ್ ನುಡಿದಂತೆ ನಡೆಯಲಿದೆಯಾ ಎಂದು ತಿಳಿಯಲು ಇದು ಮೊದಲ ಪರೀಕ್ಷೆಯಾಗಿದೆ.