ಇಂದಿನಿಂದ ಮೂರು ದಿನ ನೂತನ ಸರ್ಕಾರದ ಮೊದಲ ಅಧಿವೇಶನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಮೂರು ದಿನಗಳ ಕಾಲ ನೂತನ ಸರ್ಕಾರದ ಮೊದಲ ಅಧಿವೇಶನ ನಡೆಯಲಿದೆ. ಎರಡು ದಿನ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದು, ಕಡೆಯ ದಿನ ವಿಧಾನಸಭಾ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಇಂದು ಬೆಳಗ್ಗೆ 11 ರಿಂದ ಅಧಿವೇಶನ ಆರಂಭವಾಗಲಿದ್ದು, ಆರ್.ವಿ. ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಮೇ. 23 ಕ್ಕೆ ವಿಧಾನಸಭೆಯ ಅವಧಿ ಮುಕ್ತಾಯವಾಗಲಿದ್ದು, ನಾಳೆಯೊಳಗೆ ಶಾಸಕರ ಪ್ರಮಾಣವಚನ ಪೂರ್ಣಗೊಳ್ಳಲಿದೆ. ಜುಲೈನಲ್ಲಿ ಬಜೆಟ್ ಮಂಡನೆ ಮಾಡಲಾಗುವುದು. ಸ್ಪೀಕರ್ ಸ್ಥಾನಕ್ಕೆ ಹಿರಿಯ ನಾಯಕ ಆರ್.ವಿ. ದೇಶಪಾಂಡೆ, ಎಚ್.ಕೆ. ಪಾಟೀಲ್ ಹಾಗೂ ಟಿ.ಬಿ. ಜಯಚಂದ್ರ ಅವರು ಹೆಸರು ಕೇಳಿಬಂದಿದ್ದು, ಇಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!