ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ತುರವಿಹಾಳದಲ್ಲಿ ಮೃತಪಟ್ಟಿದೆ ಎಂದು ಹೇಳಿದ್ದ ನವಜಾತ ಶಿಶು ಅಂತ್ಯಸಂಸ್ಕಾರ ಮಾಡಲು ತೆಗೆದುಕೊಂಡು ಹೋದಾಗ ಉಸಿರಾಡುತ್ತಿರುವುದು ಗಮನಕ್ಕೆ ಬಂದಿದೆ.
ವೈದ್ಯರು ಶಿಶುವಿನ ಚಲನವಲನ ವಿಲ್ಲದ ಕಾರಣ ಮೃತಪಟ್ಟಿರುವುದಾಗಿ ಪೋಷಕರಿಗೆ ತಿಳಿಸಿದ್ದಾರೆ. ಹೀಗಾಗಿ ಮಗುವನ್ನು ಮಣ್ಣು ಮಾಡಲು ಪೋಷಕರು ತೆಗೆದುಕೊಂಡು ಹೋದ ಸಂದರ್ಭದಲ್ಲಿ ಮಗು ಉಸಿರಾಡುತ್ತಿರುವುದು ಕಂಡುಬಂದಿದೆ.
ಈರಪ್ಪ ಮತ್ತು ಅಮರಮ್ಮ ದಂಪತಿಗೆ ತುರವಿಹಾಳ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಜನಿಸಿದ್ದು, ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಸಿಂಧನೂರು ಆಸ್ಪತ್ರೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದಾರೆ. ಪೋಷಕರು ಖಾಸಗಿ ಆಸ್ಪತ್ರೆಗೆ ಮಗು ದಾಖಲಿಸಿದ್ದು, ಮೂರು-ನಾಲ್ಕು ದಿನ ಚಿಕಿತ್ಸೆ ನೀಡಿದ ಆಸ್ಪತ್ರೆಯವರು 12,000 ರೂ.ಗೂ ಅಧಿಕ ಬಿಲ್ ಮಾಡಿ ಶನಿವಾರ ಶಿಶು ಮೃತಪಟ್ಟಿರುವುದಾಗಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ.