ಹೊಸದಿಗಂತ ವರದಿ, ಬೆಳಗಾವಿ
ಉಡುಪಿಯಲ್ಲಿ ಆತ್ಮಹತ್ಯೆಗೆ ಗುತ್ತಿಗೇದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ತಾಲೂಕಿನ ಸ್ವಗ್ರಾಮ ಬಡಸ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನೆರವೇರಿತು.
ಉಡುಪಿಯಿಂದ ಬೆಳಗಾವಿ ತಾಲೂಕಿನ ಬಡಸ ಗ್ರಾಮಕ್ಕೆ ಬೀಗಿ ಪೊಲೀಸ್ ಭದ್ರತೆಯಲ್ಲಿ ಸಂತೋಷ ಪಾಟೀಲ್ ಮೃತದೇಹ ಆಗಮಿಸಿತು. ಮನೆ ಮುಂದೆ ಮೃತದೇಹ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಗ್ರಾಮದ ಮನೆ ಮುಂದೆ ಸಂತೋಷ ಪಾರ್ಥಿವ ಶರೀರದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಗ್ರಾಮದಲ್ಲಿರುವ ಸಂತೋಷ ಪಾಟೀಲ್ ಅವರ ಜಮೀನಿನಲ್ಲಿ ವೀರಶೈವ ಲಿಂಗಾಯತ ಧರ್ಮದ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಯಿತು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ