ಯಾರೇ ದ್ವೇಷ ಭಾಷಣ ಮಾಡಿದ್ರು ಸರ್ಕಾರ ಸುಮ್ಮನೆ ಇರಲು ಸಾಧ್ಯವಿಲ್ಲ: ದಿನೇಶ್ ಗುಂಡೂರಾವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದ್ವೇಷ ಭಾಷಣ ಯಾರೇ ಮಾಡಿದ್ರು ಸರ್ಕಾರ ಸುಮ್ಮನೆ ಇರೋದಕ್ಕೆ ಆಗುವುದಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಸರ್ಕಾರ ನೊಟೀಸ್ ನೀಡಿದ ಕ್ರಮವನ್ನು ಸಚಿವ ದಿನೇಶ್ ಗುಂಡೂರಾವ್‌  ಸಮರ್ಥನೆ ಮಾಡಿಕೊಂಡಿದ್ದಾರೆ.

ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಚಕ್ರವರ್ತಿ ಸೂಲಿಬೆಲೆ ಭಾಷಣಕ್ಕೆ ಸರ್ಕಾರದಿಂದ ತಡೆ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ದ್ವೇಷ ಭಾಷಣ ಮಾಡಿದ್ರೆ ಸುಮ್ಮನೆ ಇರೋಕೆ ಆಗುತ್ತಾ? ಯಾರೇ ದ್ವೇಷ ಭಾಷಣ ಮಾಡಿದ್ರು ನೊಟೀಸ್ ಜಾರಿ ಆಗುತ್ತದೆ. ನಾನೇ ದ್ವೇಷ ಭಾಷಣ ಮಾಡಿದ್ರು ನನಗೂ ನೋಟೀಸ್ ಜಾರಿ ಆಗುತ್ತದೆ ಎಂದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!