‘ಪಂಚಮಸಾಲಿ’ ಹೋರಾಟಕ್ಕೆ ಶಾಕ್ ನೀಡಿದ ಸರ್ಕಾರ: ಬೆಳಗಾವಿ ಪ್ರವೇಶಕ್ಕೆ ನಿಷೇಧ!

ಹೊಸದಿಗಂತ ಡಿಜಿಟಲ್ ಡೆಸ್ಕ್:

2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದವರು ಕಳೆದ ಹಲವು ವರ್ಷಗಳಿಂದ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಇದೀಗ ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಪಂಚಮಸಾಲಿ ಸಮುದಾಯದ ಪ್ರಮುಖರು ಬೆಳಗಾವಿ ಅಧಿವೇಶನ ನಡೆಯುವ ವೇಳೆ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದರು.

ಆದರೆ ಸರ್ಕಾರ ಶಾಕ್ ನೀಡಿದ್ದು ಹೋರಾಟದ ವಾಹನ ಬೆಳಗಾವಿ ಪ್ರವೇಶಿಸಿದಂತೆ ನಿರ್ಬಂಧಿಸಲಾಗಿದೆ.

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಶಾಕ್ ನೀಡಿದ ಸರ್ಕಾರ ಡಿಸೆಂಬರ್ 9, 10 ಹೋರಾಟದ ವಾಹನ ಬೆಳಗಾವಿ ಪ್ರವೇಶಕ್ಕೆ ನಿಷೇಧಿಸಿದೆ. 2 ಎ ಮೀಸಲಾತಿಗೆ ಪಂಚಮಸಾಲಿ ಸಮುದಾಯದಿಂದ ಹೋರಾಟ ನಡೆಸಲಾಗುತ್ತಿದ್ದು, ಹೋರಾಟಕ್ಕೆ ಬರೋ ಟ್ರ್ಯಾಕ್ಟರ್, ಕ್ರೂಜರ್ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಡಿಸೆಂಬರ್ 10ರಂದು ಸುವರ್ಣ ಸೌಧಕ್ಕೆ ಟ್ರ್ಯಾಕ್ಟರ್ ಮುತ್ತಿಗೆಗೆ ನಿರ್ಧರಿಸಿದ್ದರು. ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ. ಅಧಿವೇಶನ ವೀಕ್ಷಣೆಗೆ ಸಾರ್ವಜನಿಕರು ಶಾಲಾ ಮಕ್ಕಳು ಆಗಮಿಸಲಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!