ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದರ್ನ ವಿದ್ಯಾರ್ಥಿಯೊಬ್ಬನಿಗೆ ಜನಿವಾರ ತೆಗೆದು ಪರೀಕ್ಷೆಗೆ ಹಾಜರಾಗುವಂತೆ ಹೇಳಲಾಗಿತ್ತು. ಈ ವಿಷಯ ರಾಜ್ಯದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಜನಿವಾರ ತೆಗೆಯುವುದಿಲ್ಲ ಎಂದು ವಿದ್ಯಾರ್ಥಿ ಪರೀಕ್ಷೆ ನಿರಾಕರಿಸಿದ್ದ. ವಿದ್ಯಾರ್ಥಿ ಮುಂದೆ ಸರ್ಕಾರ ಎರಡು ಆಯ್ಕೆಗಳನ್ನು ಇಟ್ಟಿದೆ.
ಆತನಿಗೆ ಗಣಿತ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಸರ್ಕಾರ ಎರಡು ಪ್ರಮುಖ ಚಾಯ್ಸ್ ನೀಡಿದೆ..
ಆಯ್ಕೆ ಒಂದು: ಭೌತವಿಜ್ಞಾನ ಹಾಗೂ ರಾಸಯನ ವಿಜ್ಞಾನ ವಿಷಯಗಳಲ್ಲಿ ಪಡೆದ ಸರಾಸರಿ ಅಂಕಗಳನ್ನು ಗಣಿತ ವಿಷಯಕ್ಕೆ ನೀಡುವುದು.
ಆಯ್ಕೆ ಎರಡು: ಮತ್ತೊಮ್ಮೆ ಪರೀಕ್ಷೆ ಬರೆಯುವುದು.
ಸುಚಿವೃತ ಕುಲಕರ್ಣಿ ಬೀದರ್ನ ಮನ್ನಳ್ಳಿ ರಸ್ತೆಯಲ್ಲಿರುವ ಸಾಯಿಸ್ಫೂರ್ತಿ ಕಾಲೇಜಿಗೆ ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದರು. ಈ ವೇಳೆ, ಅಲ್ಲಿನ ಸಿಬಂದಿ ಜನಿವಾರ ತೆಗೆದು ಪರೀಕ್ಷೆ ಹಾಜರಾಗುವಂತೆ ಸೂಚಿಸಿದ್ದರು. ಇದಕ್ಕೆ ಒಪ್ಪದ ಸುಚಿವೃತ ಕುಲಕರ್ಣಿಯವರು ಜನಿವಾರ ತೆಗೆಯದೆ ವಾಪಸ್ ಮನೆಗೆ ಹೋಗಿದ್ದರು. ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿ ಅವರಿಗೆ ಉಚಿತವಾಗಿ ಇಂಜಿನಿಯರಿಂಗ್ ಸೀಟ್ ಕೊಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದರು.