ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾತ್ರೋ ರಾತ್ರಿ ಬರೋಬ್ಬರಿ 35 ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ ಇದೀಗ 7 ಜನ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ. ಈ ಕುರಿತು ಕೂಡಲೇ ಡಿಜಿ-ಐಜಿಪಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.
35 ಜನ ಐಪಿಎಸ್ ಅಧಿಕಾರಿಗಳಲ್ಲಿ ಇದೀಗ 7 ಅಧಿಕಾರಿಗಳಿಗೆ ತಡೆ ನೀಡಿದೆ. ಅಕ್ಷಯ್ ಮಚೀಂದ್ರ, ಅಬ್ದುಲ್ ಅಹದ್, ಭೀಮಾಶಂಕರ್ ಗುಳೇದ್, ಶೇಖರ್ ಟೆಕ್ಕಣನವರ್, ಸೈದುಲ್ಲಾ ಅಡಾವತ್, ನಿರಂಜನ್ ರಾಜೇ ಅರಸ್, ಬದರೀನಾಥ್ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಜೊತೆಗೆ ಸಂಜೀವ್ ಪಾಟೀಲ್ ವರ್ಗಾವಣೆಗೂ ರಾಜ್ಯ ಸರ್ಕಾರ ತಡೆ ನೀಡಿದ್ದು, ಕೂಡಲೇ ಡಿಜಿ-ಐಜಿಪಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ.