ಹೊಸದಿಗಂತ ವರದಿ ಬೆಳಗಾವಿ :
ಸುಪ್ರಸಿದ್ಧ ಕೊಲ್ಹಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಶುಕ್ರವಾರ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ದಂಪತಿ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಹಾಲಕ್ಷ್ಮಿ ದೇವಸ್ಥಾನದ ವತಿಯಿಂದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ದಂಪತಿಯನ್ನು ಸನ್ಮಾನಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.