ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊರೋನಾ ಕಾರಣದಿಂದ ಅರ್ಧಕ್ಕೇ ನಿಂತಿದ್ದ ಮೇಕೆದಾಟು ಪಾದಯಾತ್ರೆ ನಾಳೆಯಿಂದ ಮತ್ತೆ ಆರಂಭವಾಗಲಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದ್ದು ಮಾ.3 ಕ್ಕೆ ಮುಕ್ತಾಯವಾಗಲಿದೆ.
ಜನರ ಆರೋಗ್ಯ ಮತ್ತು ಕೋರ್ಟ್ ಆದೇಶದ ಮೇರೆಗೆ ಮೊದಲ ಹಂತದ ಪಾದಯಾತ್ರೆ ನಿಲ್ಲಿಸಿದ್ದೆವು. ಈಗ ಮತ್ತೆ ಎರಡನೇ ಹಂತದ ಪಾದಯಾತ್ರೆ ಪ್ರಾರಂಭ ಮಾಡುತ್ತಿದ್ದೇವೆ ಎಂದು ತಿಳಿಸಿದರು.