ಜನರಿಗೆ ಗುಡ್‌ನ್ಯೂಸ್‌ ಕೊಟ್ಟ ಆರೋಗ್ಯ ಇಲಾಖೆ: ಮನೆ ಬಾಗಿಲಿಗೆ ಬರಲಿದೆ ಉಚಿತ ಚಿಕಿತ್ಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಡ ವರ್ಗದ ಜನರಿಗೆ ಅದರಲ್ಲೂ ಕ್ಯಾನ್ಸರ್ ಪೀಡಿತರಿಗೆ, ವೃದ್ಧರಿಗೆ ಹಾಗೂ ಗಂಭೀರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಹೊಸ ಪ್ಲ್ಯಾನ್‌ ಮಾಡಿದೆ. ಈ ಬಾರಿ ಮನೆ ಬಾಗಿಲಿಗೆ ಒಪಿಡಿ  ಸೌಲಭ್ಯ ನೀಡಲು ಮುಂದಾಗಿದೆ.

ಹೀಗಾಗಿ ಸಿವಿ ರಾಮನ್ ನಗರದ ಸಾರ್ವಜನಿಕರ ಆಸ್ಪತ್ರೆಯಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಂಡು ಆಯ್ದ ಏರಿಯಾಗಳಲ್ಲಿ ಚಿಕಿತ್ಸೆ ನೀಡಲು ಸಜ್ಜಾಗಿದೆ. ಕರ್ನಾಟಕದಲ್ಲೇ ಮೊದಲ ಬಾರಿಗೆ ಕ್ಯಾನ್ಸರ್ ಪೀಡಿತರಿಗೆ, ಬ್ರೇನ್ ಹ್ಯಾಮರೇಜ್, ವೃದ್ಧರು ಹಾಗೂ ಗಂಭೀರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಆರೋಗ್ಯ ಇಲಾಖೆ ಮನೆ ಮನೆಗೆ ತೆರಳಿ ಉಚಿತ ಒಪಿಡಿ ಚಿಕಿತ್ಸೆ ನೀಡಲು ಮುಂದಾಗಿದೆ. ಪೈಲೆಟ್ ಯೋಜನೆಯಡಿ ಸಿವಿ ರಾಮನ್ ನಗರದಲ್ಲಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾರಂಭಿಕವಾಗಿ ಈ ಒಪಿಡಿ ಉಚಿತ ಚಿಕಿತ್ಸೆ ನೀಡಲು ಮುಂದಾಗಿದೆ.

ವಯೋವೃದ್ಧರು, ಕ್ಯಾನ್ಸರ್ ಪೀಡಿತರು, ಬ್ರೇನ್ ಹ್ಯಾಮರೇಜ್ ಸೇರಿದ್ದಂತೆ ಗಂಭೀರ ಸಮಸ್ಯೆಯಿಂದ ಬಳಲುವ ರೋಗಿಗಳು ಇನ್ಮುಂದೆ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಹೋಗಬೇಕಿಲ್ಲ, ಮನೆಯ ಬಳಿಯೇ ಒಪಿಡಿ ವ್ಯವಸ್ಥೆ ಮಾಡಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಕ್ಯಾನ್ಸರ್, ಹೃದಯ ಸಮಸ್ಯೆ ಬ್ರೈನ್ ಹ್ಯಾಮರೇಜ್ , ಸೇರಿದಂತೆ ಮಾರಣಾಂತಿಕ ರೋಗಗಳಿಂದ ಬಳಲುತ್ತಿರುವವರಿಗೆ ಈ ಸೇವೆ ಸಿಗಲಿದೆ.

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುವವರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಲು ಸಾಧ್ಯವಾಗುವುದಿಲ್ಲ. ಆಸ್ಪತ್ರೆಗೆ ಬಂದಾಗ ಕ್ಯೂನಲ್ಲಿ ನಿಂತು ಕಾಯುವ ಪರಿಸ್ಥಿತಿ ಇರುತ್ತದೆ. ಈ ಹಿನ್ನೆಲೆ ಅಂತವರಿಗಾಗಿ ತುರ್ತಾಗಿ ಚಿಕಿತ್ಸೆ ನೀಡುವ ಸಲುವಾಗಿ ಈ ಸೇವೆ ನೀಡಲು ಇಲಾಖೆ ನಿರ್ಧರಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!